ಕಾರಿನಲ್ಲಿ ಗಾಂಜಾತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ  ಇವರಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆದ ಪೊಲೀಸರು

ಶಿವಮೊಗ್ಗ (ಸೆ.12): ಕಾರಿನಲ್ಲಿ ಗಾಂಜಾತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು ಇವರಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ. 

 ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ತುಂಗಾನಗರ ಠಾಣೆ ಪೋಲಿಸರು ಇಂದು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಈ ವೇಳೆ ನಾಲ್ವರು ಪರಾರಿಯಾಗಿದ್ದಾರೆ.

ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಈ ಬಗ್ಗೆ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಡಿವೈಎಸ್ಪಿಪ್ರಶಾಂತ್‌ ಮುನ್ನೋಳಿ ಮಾರ್ಗದರ್ಶನದಲ್ಲಿ , ಇನ್ಸ್‌ಪೆಕ್ಟರ್‌ ದೀಪಕ್ ಮತ್ತು ಸಿಬ್ಬಂದಿ ಖಚಿತ ಮಾಹಿತಿಯನ್ನಾದರಿಸಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

5 ವರ್ಷದ ಹಿಂದೆ ಬಿಹಾರದಿಂದ ಬಂದು ಗಾಂಜಾ ಮಾರಿ 3 ಕೋಟಿ, ಫ್ಲಾಟ್ ಮಾಡಿದ್ದವನ ಆಸ್ತಿ ಜಪ್ತಿ!

ಪ್ಲಂಬರ್‌ ಕೆಲಸ ಮಾಡುತ್ತಿದ್ದ ಶೇಖ್ ಅಹಮದ್ , ಮೊಹಮದ್ ಮುಸ್ತಫಾ , ಪೇಂಟರ್ ಅಲ್ಲಾಭಕ್ಷಿ ಎಂಬ ಮೂವರನ್ನು ಬಂಧಿಸಲಾಗಿದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ರಾಹಿಲ್ , ಕುರಂ , ತಾಸೀರ್ , ಮಾಡ್ಲರ್‌ ಶಾರೂ ಪರಾರಿಯಾಗಿದ್ದಾರೆ.

ಬಂಧಿತರಿಂದ ಪೊಲೀಸರು ಎರಡು ಕೆಜಿ 120 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯದ ಸುಮಾರು 80 ಸಾವಿರ ರೂ . ಎಂದು ಅಂದಾಜಿಸಲಾಗಿದೆ . ಘಟನೆಗೆ ಬಳಕೆ ಮಾಡಿಕೊಂಡಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ .