ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್| ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ನಡೆದ ಘಟನೆ| ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದಿದ್ದರಿಂದ ಗ್ಯಾಸ್ ಸೋರಿಕೆ|
ಉಪ್ಪಿನಂಗಡಿ(ಮಾ.28): ಗ್ಯಾಸ್ ಟ್ಯಾಂಕರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿ ಇಂದು(ಶನಿವಾರ) ಬೆಳಗ್ಗೆ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗ್ಯಾಸ್ ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದಿದ್ದರಿಂದ ಗ್ಯಾಸ್ ಸೋರಿಕೆ ಉಂಟಾಗಿದ್ದು, ಉಪ್ಪಿನಂಗಡಿಯಲ್ಲಿದ್ದ HPCL ಕಂಪೆನಿಯ ತುರ್ತು ಪರಿಸ್ಥಿತಿ ವಾಹನದವರು ಸ್ಥಳಕ್ಕೆ ಆಗಮಿಸಿ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಲು ವ್ಯವಸ್ಥೆ ಮಾಡುತ್ತಿದ್ದಾರೆ.
ಕೊರೋನಾ ಭೀತಿ: ಬೆಂಗ್ಳೂರು ಬಿಟ್ಟು ಹಳ್ಳಿಕಡೆ ಹೊರಟವರು ಮಸಣ ಸೇರಿದ್ರು...!
ಬಂದ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಬರುತ್ತಿಲ್ಲವಾದರೂ, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು.
