ನದಿಯಲ್ಲಿ ತೇಲಿ ಬಂದು ಗ್ರಾಮದ ಬಳಿ ಶವವೊಂದು ಸಿಲುಕಿಕೊಂಡಿತ್ತು. ಆ ಶವದ ಬಳಿ 1 ಕೆಜಿಗೂ ಅತ್ಯಧಿಕ ಪ್ರಮಾನದ ಬಂಗಾರವಿತ್ತು

 ಅಥಣಿ (ಅ.09): ನದಿಯಲ್ಲಿ ತೇಲಿ ಬಂದ ಮೃತದೇಹದ ಬಳಿ 1.5 ಕೆಜಿ ಬಂಗಾರ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅವರಕೋಡ ಗ್ರಾಮದ ಕೃಷ್ಣಾ ನದಿಯಲ್ಲಿ ಅ. 4 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Add Asianetnews Kannada as a Preferred SourcegooglePreferred

ಕೃಷ್ಣಾ ನದಿಯಲ್ಲಿ ತೇಲಿಬಂದ ಮೃತದೇಹವು ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಮಿರಜ ತಾಲೂಕಿನ ಪಾಟಗಾಂವ ಗ್ರಾಮದ ಸಾಗರ ಪಾಟೀಲ (30) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ನದಿಯಲ್ಲಿ ತೇಲಿಬಂದ ಮೃತದೇಹ ಅವರಕೋಡ ಗ್ರಾಮದ ದಡದಲ್ಲಿ ಸಿಕ್ಕಿರುವುದನ್ನು ಗಮನಿಸಿದ ಗ್ರಾಮಸ್ಥರು ಈ ವಿಷಯವನ್ನು ಅಥಣಿ ಪೊಲೀಸರಿಗೆ ತಿಳಿಸಿದ್ದಾರೆ. ಈ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಹಾವೇಣಿ ಆಟವಾಡುತ್ತಿದೆ ಚಿನ್ನದ ದರ: ಇಲ್ಲಿದೆ ಅ.08ರ ಗೋಲ್ಡ್ ರೇಟ್! .

ಈ ವೇಳೆ ಶವದ ಜೊತೆಗೆ 1.5 ಕೆಜಿಯ ಗಟ್ಟಿಬಂಗಾರ ಕೂಡ ಪತ್ತೆಯಾಗಿದೆ. ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿರುವುದರಿಂದ ಕೊಲೆ ಶಂಕೆ ವ್ಯಕ್ತವಾಗಿದೆ. ಮಾತ್ರವಲ್ಲ, ಮೃತಪಟ್ಟವ್ಯಕ್ತಿಯ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಕುರಿತು ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಲಯ ಡಿವೈಎಸ್ಪಿ ಗಿರೀಶ ವಿ.ಎಸ್‌. ಕೂಡ ಮಾಹಿತಿ ನೀಡಿದ್ದಾರೆ. ಆದರೆ, ಇದು ಕೊಲೆಯೋ ಹೇಗೆ ಎಂಬುವುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.