ರಾಜ್ಯದಲ್ಲಿ ಚುನಾವಣೆಯೊಂದು ಮುಕ್ತಾಯವಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕನಸು ನುಚ್ಚುನೂರಾಗಲಿದೆ ಎಂದು ಭವಿಷ್ಯ ನುಡಿಯಲಾಗಿದೆ.
ತುಮಕೂರು (ನ.01): ಉಪ ಚುನಾವಣೆಯ ಫಲಿತಾಂಶದಿಂದಾಗಿ ಕಾಂಗ್ರೆಸ್ ಒಡೆದ ಮನೆಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕನಸು ನುಚ್ಚು ನೂರಾಗಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಭವಿಷ್ಯ ನುಡಿದರು.
ಅವರು ಶಿರಾದಲ್ಲಿ ಮಾತನಾಡಿದ ಅವರು, ಹಾಗೆಯೇ ಮತ್ತೆ ಮುಖ್ಯಮಂತ್ರಿ ಆಗುವುದಾಗಿ ಹೊರಟಿರುವ ಸಿದ್ದರಾಮಯ್ಯ ಅವರಿಗೂ ಮುಖಭಂಗವಾಗಲಿದೆ ಎಂದರು.
ಗೊಲ್ಲರಹಟ್ಟಿಗಳಿಗೆ ಹೋದರೆ ಕಣ್ಣೀರು ಬರುತ್ತದೆ. ಈವರೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೂಲ ಸೌಕರ್ಯ ಕಲ್ಪಿಸಿಲ್ಲ. ಎಸ್ಸಿ, ಎಸ್ಟಿ ಕಾಲೋನಿಯ ಸ್ಥಿತಿ ಕೂಡ ದಯನೀಯವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಅನ್ನು ಇಲ್ಲಿಯವರೆಗೆ ಬೆಂಬಲಿಸಿ ತಪ್ಪು ಮಾಡಿದ್ದೇವೆಂಬುದಾಗಿ ಜನರಿಗೆ ಅರಿವಾಗಿದೆ ಎಂದರು.
ಬಿಜೆಪಿ ಅಭ್ಯರ್ಥಿ ಪರ 'ಡಿ' ಬಾಸ್ ಪ್ರಚಾರ: ಡಿಕೆಶಿ ಹೇಳಿದ್ದು ಹೀಗೆ...! .
ಈಗಾಗಲೇ ರಾಜ್ಯದಲ್ಲಿ ಉಪ ಚುನಾವಣೆ ಸಮರ ಜೋರಾಗಿದೆ. ಇದೇ ನವೆಂಬರ್ 3 ರಂದು ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳು ತಮ್ಮದೇ ಗೆಲುವಿಗಾಗಿ ಭಾರೀ ಪೈಪೋಟಿ ನಡೆಸುತ್ತಿವೆ.
