ತುಮಕೂರು: 4 ಲಕ್ಷ ಲಂಚ ಪಡೆದವನಿಗೆ 4 ವರ್ಷ ಜೈಲು
4,000 ಲಂಚ ಪಡೆಯುವಾಗ ಸಿಕ್ಕಿಬಿದ್ದ ಸರ್ಕಾರಿ ಸರ್ವೇಯರ್ಗೆ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿದೆ. ಕುಣಿಗಲ್ ತಾಲೂಕು ಸತೀಶ್ ಕುಮಾರ್ ಎಂಬಾತ 2014ರಲ್ಲಿ ವ್ಯಕ್ತಿಯೊಬ್ಬರಿಂದ ಜಮೀನಿನ ಅಳೆತೆಗೆ ನಾಲ್ಕು ಸಾವಿರ ಲಂಚ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿ ತುಮಕೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ತುಮಕೂರು(ಆ.15): ನಾಲ್ಕು ಸಾವಿರ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದ ಸರ್ಕಾರಿ ಸರ್ವೇಯರ್ ಒಬ್ಬರಿಗೆ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿದೆ.
ಕುಣಿಗಲ್ ತಾಲೂಕು ಸತೀಶ್ ಕುಮಾರ್ ಎಂಬಾತ 2014ರಲ್ಲಿ ವ್ಯಕ್ತಿಯೊಬ್ಬರಿಂದ ಜಮೀನಿನ ಅಳೆತೆಗೆ ನಾಲ್ಕು ಸಾವಿರ ಲಂಚ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿ ತುಮಕೂರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಲೋಕಯುಕ್ತ ಇನ್ಸ್ಪೆಕ್ಟರ್ ಗೌತಮ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಲಂಚದ ಸಮೇತ ಸಿಕ್ಕಿಬಿದ್ದಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದೆ. ಲೋಕಾಯುಕ್ತ ಪರವಾಗಿ ವಿಶೇಷ ಆಭಿಯೋಜಕ ಎನ್.ಬಸವರಾಜು ವಾದ ಮಂಡಿಸಿದ್ದರು.