Asianet Suvarna News Asianet Suvarna News

ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ : ಹೊಸ ಸೇವೆ ಶೀಘ್ರ ಶುರು

ಶೀಘ್ರ ಕರ್ನಾಟಕ ಸಾರಿಗೆ ಇಲಾಖೆಯಿಂದ ಹೊಸ ಸೇವೆಗಳು ಆರಂಭವಾಗಲಿವೆ. ಸಾರ್ವಜನಿರಿಗೆ ಇದರಿಂದ ಸಾಕಷ್ಟು ಅನುಕೂಲತೆ ಒದಗಲಿದೆ.

Govt may soon allow courier parcel services From Transportation Department
Author
Bengaluru, First Published Aug 16, 2020, 11:33 AM IST

ರಾಯಚೂರು (ಆ.16): ತೀವ್ರ ಸಂಕಷ್ಟದಲ್ಲಿರುವ ಸಾರಿಗೆ ಇಲಾಖೆಯನ್ನು ಆರ್ಥಿಕ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದ್ದು, ಆ ನಿಟ್ಟಿನಲ್ಲಿ ಇಲಾಖೆಯಿಂದ ಕೋರಿಯರ್‌ ಸೇವೆ ಆರಂಭಿಸಲಾಗುತ್ತಿದೆ. 

ಇದರ ಜೊತೆಗೆ ಬಸ್‌ಗಳಲ್ಲಿ ಸೈಕಲ್‌ ತೆಗೆದುಕೊಂಡು ಹೋಗಲು ವ್ಯವಸ್ಥೆ ಕಲ್ಪಿಸುವ ಚಿಂತನೆ ಸಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಬೆಂಗಳೂರು ಗಲಭೆ: ಕಾಂಗ್ರೆಸ್‌ ಮುಖವಾಡ ಬಯಲು, ಡಿಸಿಎಂ ಲಕ್ಷ್ಮಣ ಸವದಿ...

ಡಿಎಆರ್‌ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯ ಬಸ್‌ಗಳು ರಾಜ್ಯದ ಪ್ರತಿ ನಗರ, ಪಟ್ಟಣ, ಗ್ರಾಮೀಣ ಭಾಗಕ್ಕೆ ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಇಲಾಖೆಯಿಂದ ಕೋರಿಯರ್‌ ಸೇವೆ ಆರಂಭಿಸಿ ಖಾಸಗಿ ಕೋರಿಯರ್‌ಗಿಂತಲೂ ವೇಗವಾಗಿ ಸೇವೆ ಒದಗಿಸಿಕೊಡಲಾಗುವುದು ಎಂದು ತಿಳಿಸಿದರು.

 ಅದೇ ರೀತಿ ಸರ್ಕಾರಿ ಬಸ್‌ಗಳಲ್ಲಿ ಸೈಕಲ್‌ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಿಕೊಡಲು ಚಿಂತಿಸಲಾಗಿದೆ. ಆ ನಿಟ್ಟಿನಲ್ಲಿ ಬಸ್‌ಗಳ ಮುಂದೆ ಹಾಗೂ ಹಿಂಭಾಗದಲ್ಲಿ ಸ್ಟ್ಯಾಂಡ್‌ ಅಳವಡಿಸಲಾಗುವುದು ಎಂದು ತಿಳಿಸಿದರು.

Follow Us:
Download App:
  • android
  • ios