ಮೈಸೂರು ಜಿಲ್ಲೆಯಲ್ಲಿ ಗ್ರಾ.ಪಂ ಚುನಾವಣೆ ವಿಚಾರ ಕರ್ಪೂರವಳ್ಳಿ ಗ್ರಾ.ಪಂ.ವ್ಯಾಪ್ತಿಯ ರಾಂಪುರ ಗ್ರಾಮದ ಮತಗಟ್ಟೆಯಲ್ಲಿ ವಾಮಾಚಾರ ಶಂಕೆ/ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಗ್ರಾಮ/ಮತಗಟ್ಟೆ ಸಂಖ್ಯೆ 19ರಲ್ಲಿ ವಾಮಾಚಾರ ಆರೋಪ/ ಸ್ಪರ್ಧೆಯಲ್ಲಿರುವ 7 ಮಂದಿ ಅಭ್ಯರ್ಥಿಗಳು.
ಮೈಸೂರು(ಡಿ. 20) ಮೈಸೂರು ಜಿಲ್ಲೆ ಕರ್ಪೂರವಳ್ಳಿ ಗ್ರಾ.ಪಂ.ವ್ಯಾಪ್ತಿಯ ರಾಂಪುರ ಗ್ರಾಮದ ಮತಗಟ್ಟೆಯಲ್ಲಿ ವಾಮಾಚಾರ ಶಂಕೆ ವ್ಯಕ್ತವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಗ್ರಾಮದ ಮತಗಟ್ಟೆ ಸಂಖ್ಯೆ 19ರಲ್ಲಿ ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. 7 ಮಂದಿ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದು ಇದರಲ್ಲಿ ಒಬ್ಬರು ವಾಮಾಚಾರ ಮಾಡಿರುವ ಆರೋಪ ಕೇಳಿಬಂದಿದೆ.
ಮತಕೇಂದ್ರದ ಮುಂದೆ ಮಡಿಕೆ ಗೇಟ್ಗೆ ತಾಯತ ಕಟ್ಟಲಾಗಿದೆ. 7 ಅಭ್ಯರ್ಥಿಗಳು ಈ ಬಗ್ಗೆ ಪ್ರಮಾಣ ಮಾಡಲು ಜನರು ಒತ್ತಾಯ ಮಾಡಿದ್ದಾರೆ. ಇಲ್ಲವಾದರೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.
