ಹಾಪ್ಕಾಮ್ಸ್ನಲ್ಲಿ ದ್ರಾಕ್ಷಿ-ಕಲ್ಲಂಗಡಿ ಮೇಳ ಶುರು, ರಿಯಾಯಿತಿ ದರ
ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ (ಹಾಪ್ಕಾಮ್ಸ್) ಲಾಲ್ಬಾಗ್ನಲ್ಲಿರುವ ಹಾಪ್ಕಾಮ್ಸ್ ಕೇಂದ್ರ ಕಚೇರಿ ಆವರಣದಲ್ಲಿ ಫೆ.19ರಿಂದ ಮಾ.31ರವರೆಗೆ ‘ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳ’ ಹಮ್ಮಿಕೊಂಡಿದೆ.
ಬೆಂಗಳೂರು(ಫೆ.18): ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ (ಹಾಪ್ಕಾಮ್ಸ್) ಲಾಲ್ಬಾಗ್ನಲ್ಲಿರುವ ಹಾಪ್ಕಾಮ್ಸ್ ಕೇಂದ್ರ ಕಚೇರಿ ಆವರಣದಲ್ಲಿ ಫೆ.19ರಿಂದ ಮಾ.31ರವರೆಗೆ ‘ದ್ರಾಕ್ಷಿ ಹಾಗೂ ಕಲ್ಲಂಗಡಿ ಮೇಳ’ ಹಮ್ಮಿಕೊಂಡಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಹಾಪ್ಕಾಮ್ಸ್ ಅಧ್ಯಕ್ಷ ಎ.ಎಸ್.ಚಂದ್ರೇಗೌಡ ಮಾತನಾಡಿ, ದ್ರಾಕ್ಷಿ ಹಾಗೂ ಕಲ್ಲಂಗಡಿ ಬೆಳೆಗಾರರನ್ನು ಪ್ರೋತ್ಸಾಹಿಸುವ, ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಹಣ್ಣು ಒದಗಿಸಲು ಮೇಳ ಏರ್ಪಡಿಸಿದ್ದೇವೆ. ಶರದ್ ಸೀಡ್ಲೆಸ್, ಕೃಷ್ಣ ಶರದ್, ಥಾಮ್ಸನ್, ಜಂಬೂ ಸೇರಿದಂತೆ ಅಂದಾಜು 15 ತಳಿಯ ದ್ರಾಕ್ಷಿ, ಐದು ಬಗೆಯ ಕಲ್ಲಂಗಡಿ ಜತೆಗೆ ಖರ್ಬೂಜ, ಕಿತ್ತಳೆ, ಚಕ್ಕೋತ, ಒಣದ್ರಾಕ್ಷಿ ಮತ್ತಿತರ ಡ್ರೈಪ್ರುಟ್ಸ್ಗಳು ಶೇಕಡ 10 ರಿಯಾಯಿತಿ ದರದಲ್ಲಿ ದೊರೆಯುತ್ತವೆ. ಈ ಮೇಳದ ಅವಧಿಯಲ್ಲಿ ನಗರದಲ್ಲಿರುವ 200ಕ್ಕೂ ಅಧಿಕ ಹಾಪ್ಕಾಮ್ಸ್ ಮಳಿಗೆಗಳಲ್ಲಿ ಗ್ರಾಹಕರು ಖರೀದಿಸಬಹುದು ಎಂದರು.
ಫ್ರಾನ್ಸ್, ಇಂಗ್ಲೆಂಡ್ ಹಿಂದಿಕ್ಕಿದ ಭಾರತ: ವಿಶ್ವದ 5ನೇ ಅತಿದೊಡ್ಡ ಆರ್ಥಿಕ ದೇಶ!
ಬಿಜಾಪುರ, ಬೆಳಗಾವಿ, ಬಾಗಲಕೋಟೆ ಮತ್ತು ಚಿಕ್ಕ ಬಳ್ಳಾಪುರಗಳಲ್ಲಿ ಒಟ್ಟು 26,600 ಹೆಕ್ಟೆರ್ ಪ್ರದೇಶದಲ್ಲಿ ದ್ರಾಕ್ಷಿ, ಕಲ್ಲಂಗಡಿ ಬೆಳೆಯಲಾಗಿದೆ. ಆ ಭಾಗಗಳ ರೈತರಿಗೆ ಮೇಳದ ಲಾಭ ಪಡೆಯುವಂತೆ ಕೋರಲಾಗಿದೆ. ಈ ಬಾರಿ 500 ಟನ್ ದ್ರಾಕ್ಷಿ ಹಾಗೂ 1,500 ಕಲ್ಲಂಗಡಿ ಮಾರಾಟ ಮಾಡುವ ಗುರಿ ಹೊಂದಿದ್ದೇವೆ ಎಂದರು.
ಕಾರಿನಲ್ಲಿ ಮಹಿಳಾ ಟೆಕಿಯ ಬಟ್ಟೆ ಹಿಡಿದು ಎಳೆದಾಡಿದ!
ತೋಟಗಾರಿಕೆ ಸಚಿವ ನಾರಾಯಣ ಗೌಡ ಅವರು ಫೆ.19ರಂದು ಮೇಳ ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ವಸತಿ ಸಚಿವ ವಿ.ಸೋಮಣ್ಣ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಲಿದ್ದಾರೆ. ಅತಿಥಿಗಳಾಗಿ ತೋಟಗಾರಿಕೆ ಇಲಾಖೆ ನಿರ್ದೇಶಕ ವೆಂಕಟೇಶ್, ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಹಾಗೂ ಪಾಲಿಕೆ ಸದಸ್ಯೆ ವಾಣಿ ವಿ.ರಾವ್ ಆಗಮಿಸಲಿದ್ದಾರೆ. ಶಾಸಕ ಉದಯ್ ಗರುಡಾಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.