ಜೆಡಿಎಸ್ ಮುಖಂಡ ಜಿಟಿ ದೇವೇಗೌಡ ಅವರು ಪಕ್ಷದ ನಾಯಕರ ವಿರುದ್ಧ ಫುಲ್ ಗರಂ ಆಗಿದ್ದಾರೆ.
ಮೈಸೂರು (ಡಿ.14): ಗ್ರಾಪಂ ಚುನಾವಣೆಯಲ್ಲಿ ನಾನು ಭಾಗವಹಿಸುವುದಿಲ್ಲ. ಚಾಮುಂಡೇಶ್ವರಿ ಕ್ಷೇತ್ರಕ್ಕೂ ಹೋಗುವುದಿಲ್ಲ, ಹುಣಸೂರಿಗೂ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ನಗರದಲ್ಲಿ ಭಾನುವಾರ ಮಾತನಾಡಿದ ಅವರು, ನಿನ್ನೆಯಷ್ಟೇ ಜೆಡಿಎಸ್ ಪಕ್ಷದಿಂದ ಹುಣಸೂರು ಕ್ಷೇತ್ರದ ಉಸ್ತುವರಿಯನ್ನಾಗಿ ಮಾಡಲಾಗಿತ್ತು. ಈ ವಿಚಾರ ಕೂಡ ಪಕ್ಷದ ಮೂಲಗಳಿಂದ ತಿಳಿದಿಲ್ಲ.
ಗ್ರಾ.ಪಂ ಚುನಾವಣೆಗೆ ಜೆಡಿಎಸ್ ತಂತ್ರ: ಒಂದಾದ ದಳಪತಿಗಳು..! ...
ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ. ಭಾನುವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಸಭೆಗೂ ಹಾಜರಾಗಲ್ಲ. ಆ ಸಭೆಗೆ ಆಹ್ವಾನ ಸಹ ನೀಡಿಲ್ಲ.
ಗ್ರಾಪಂ ಚುನಾವಣೆ ಪಕ್ಷದ ಚಿಹ್ನೆ ಮೇಲೆ ನಡೆಯುವ ಚುನಾವಣೆಯಲ್ಲ. ಈ ಕಾರಣಕ್ಕೋಸ್ಕರ ನಾನು ಗ್ರಾಪಂ ಚುನಾವಣೆಯಲ್ಲಿ ತಟಸ್ಥವಾಗಿರುತ್ತೇನೆ ಎಂದರು.
