ಚನ್ನಪಟ್ಟಣದ ವಿರೂಪಸಂದ್ರದ ಮಾವಿನ ತೋಟದಲ್ಲಿ ಕಾವಲು ಕಾಯುವ ಕೆಲಸ ನಿರ್ವಹಿಸುತ್ತಿದ್ದ ವೀರಭದ್ರಯ್ಯ ಅವರು ಮುಂಜಾನೆ ಮೂತ್ರ ವಿಸರ್ಜನೆಗೆಂದು ತೋಟದಲ್ಲಿನ ಬೇಲಿ ಕಡೆ ಹೋಗುವಾಗ ಅಲ್ಲಿದ್ದ ಆನೆ ಏಕಾಏಕಿ ದಾಳಿ ನಡೆಸಿದೆ. 

ಚನ್ನಪಟ್ಟಣ(ಜೂ.04):  ತೋಟ ಕಾಯುತ್ತಿದ್ದ ಕಾವಲುಗಾರನೊಬ್ಬ ಆನೆ ದಾಳಿಗೆ ಕಬ್ಬಾಳುವಿನಲ್ಲಿ ಬಲಿಯಾದ ಘಟನೆ ಮಾಸುವ ಮುನ್ನವೇ ಕಾಡಾನೆ ದಾಳಿಗೆ ಸಿಲುಕಿ ಮಾವಿನ ತೋಟದಲ್ಲಿ ಕಾವಲು ಕಾಯುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ವಿರೂಪಸಂದ್ರ ಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದಿದೆ. 

Add Asianetnews Kannada as a Preferred SourcegooglePreferred

ವೀರಭದ್ರಯ್ಯ (33) ಕಾಡಾನೆ ದಾಳಿಯಿಂದ ಮೃತಪಟ್ಟವರು. ಚನ್ನಪಟ್ಟಣದ ವಿರೂಪಸಂದ್ರದ ಮಾವಿನ ತೋಟದಲ್ಲಿ ಕಾವಲು ಕಾಯುವ ಕೆಲಸ ನಿರ್ವಹಿಸುತ್ತಿದ್ದ ವೀರಭದ್ರಯ್ಯ ಅವರು ಮುಂಜಾನೆ ಮೂತ್ರ ವಿಸರ್ಜನೆಗೆಂದು ತೋಟದಲ್ಲಿನ ಬೇಲಿ ಕಡೆ ಹೋಗುವಾಗ ಅಲ್ಲಿದ್ದ ಆನೆ ಏಕಾಏಕಿ ದಾಳಿ ನಡೆಸಿದೆ. 

ಧರ್ಮಸ್ಥಳ- ಸುಬ್ರಹ್ಮಣ್ಯಕ್ಕೆ ಹೋಗುವವರೇ ಎಚ್ಚರ: ರಸ್ತೆಯಲ್ಲಿಯೇ ಕಾಡಾನೆಗಳ ದಾಳಿ

ಮೂತ್ರವಿಸರ್ಜನೆಗೆಂದು ಬೇಲಿಪಕ್ಕ ಹೋಗಿದ್ದಾಗ ಮರೆಯಲ್ಲಿ ನಿಂತಿದ್ದ ಕಾಡಾನೆ ಏಕಾಏಕಿ ವೀರಭದ್ರಯ್ಯ ಮೇಲೆ ದಾಳಿ ನಡೆಸಿದೆ. ನಂತರ ಅವರ ತಲೆಯನ್ನು ತುಳಿದು ಅಪ್ಪಚ್ಚಿ ಮಾಡಿದೆ. 4 ದಿನಗಳ ಹಿಂದಷ್ಟೇ ಸಾತನೂರಿನ ಕಬ್ಬಾಳಿನಲ್ಲಿ ಕಾಡಾನೆ ದಾಳಿಗೆ ಮಾವಿನ ತೋಟ ಕಾಯುತ್ತಿದ್ದ ಕಾವಲುಗಾರನೊಬ್ಬ ಮೃತಪಟ್ಟಿದ್ದ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಅಕ್ಕೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.