ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಗೆ ಸಿಲುಕಿರುವ ಕೊಡಗು ಜಿಲ್ಲೆ ಮತ್ತು ಕೇರಳ ರಾಜ್ಯಕ್ಕೆ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಿಂದ ತಲಾ 

ರಾಯಚೂರು: 15 ಲಕ್ಷ ಜೊತೆಗೆ ಸಿದ್ಧಪಡಿಸಿದ ಆಹಾರ, ಬಟ್ಟೆ, ಔಷಧಿ, ದವಸ-ಧಾನ್ಯ ಇತರೆ ಸಾಮಗ್ರಿಗಳನ್ನು ವಿತರಿಸಲಾಗುವುದು ಎಂದು ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಮಂತ್ರಾಲಯದ ಶ್ರೀಮಠದಲ್ಲಿ ಗುರುವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಸೇರಿ ವಿವಿಧ ಪ್ರದೇಶಗಳಲ್ಲಿರುವ ಶ್ರೀರಾಯರ ಶಾಖಾ ಮಠಗಳ ಅಧಿಕಾರಿ, ಸಿಬ್ಬಂದಿ ಹಾಗೂ ಪದಾಧಿಕಾರಿಗಳ ಮತ್ತು ಭಕ್ತರ ತಂಡಗಳು ಕೊಡಗು, ಕೇರಳಗಳಿಗೆ ಹೋಗಿ ನೆರೆಸಂತ್ರಸ್ತರಿಗೆ ಸಹಾಯವನ್ನು ಮಾಡುತ್ತಿದ್ದಾರೆ ಎಂದರು. ಈ ಹಿಂದೆ ಕಾರ್ಗಿಲ್‌ ಯುದ್ಧದ ಸಂದರ್ಭ, ನಾಗಪಟ್ಟಣಂ, ಕಡಲೂರು ಸೇರಿದಂತೆ ಅನೇಕ ಪ್ರದೇಶದಲ್ಲಿ ಸುನಾಮಿ ಆಗಮಿಸಿದಾಗ, ತಮ್ಮ ಅವಧಿಯಲ್ಲಿ ನೇಪಾಳದಲ್ಲಿ ಸಂತ್ರಸ್ತರಿಗೆ ಬೃಹತ್‌ ಪ್ರಮಾಣದಲ್ಲಿ ಶ್ರೀಮಠದಿಂದ ದವಸಧಾನ್ಯಗಳನ್ನು ಸಂಗ್ರಹಿಸಿ ನೆರವು ನೀಡಲಾಗಿತ್ತು. ಇದೀಗ ಕೊಡಗು ಜಿಲ್ಲೆ ಹಾಗೂ ಕೇರಳ ರಾಜ್ಯಗಳಿಗೆ ತಾತ್ಕಾಲಿಕವಾಗಿ ಈ ನೆರವು ತೀಡುತ್ತಿದ್ದು, ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಠ ಚಿಂತನೆ ನಡೆಸಿದೆ ಎಂದರು.

ಪ್ರವಾಹ ಸಂಬಂದಪಟ್ಟ ಸುದ್ಧಿಗಳಿಗೆ ಲಿಂಕ್:

45 ಕುಟುಂಬಗಳ ಜೀವ ಉಳಿಸಿದ 1 ‘ಸಂದೇಶ’

ಕೊಡಗಿನ ಬಗ್ಗೆ ಭಾವನಾತ್ಮಕ ಪತ್ರ ಬರೆದ ರಶ್ಮಿಕಾ ಮಂದಣ್ಣ

ಮಗನ ಮದುವೆ ಬೀಗರ ಔತಣದ ದುಡ್ಡು ದೇಣಿಗೆಗೆ: ಸಚಿವ