Asianet Suvarna News Asianet Suvarna News

ಕುಮಾರಸ್ವಾಮಿಗೆ ಕಾಡುತ್ತಿದೆಯಾ ಆ ಒಂದು ಕೊರಗು? ದೇವಸ್ಥಾನದಲ್ಲಿ ಎಚ್‌ಡಿಕೆ ತಪ್ಪುಕಾಣಿಕೆ ಸಲ್ಲಿಕೆ

ರಾಮನಗರದ ಚಾಮುಂಡೇಶ್ವರಿ ದೇವಿಗೆ ತಪ್ಪು ಕಾಣಿಕೆ ಸಮರ್ಪಿಸಿದ ಕುಮಾರಸ್ವಾಮಿ| ಈ ಹಿಂದೆ ದೇವಸ್ಥಾನದ ಮುಂದೆ ಬಾಷಣ ಮಾಡುವಾಗ ನನಗೆ ಯಾವುದೇ ಅಧಿಕಾರ ಬೇಡ ಎಂದಿದ್ದ ಹೆಚ್‌ಡಿಕೆ| ಬಳಿಕ ಎರಡು ಬಾರಿ ಸಿಎಂ ಆದರೂ ಅರ್ಧಕ್ಕೆ ಅಧಿಕಾರ ಕಳೆದುಕೊಂಡಿದ್ದ ಕುಮಾರಸ್ವಾಮಿ| 

H D Kumaraswamy Did Pooja to Lakshmi Narasimhaswamy grg
Author
Bengaluru, First Published Jan 15, 2021, 1:35 PM IST

ರಾಮ​ನ​ಗರ(ಜ.15): ಯುವರಾಜ ಸ್ವಾಮೀಜಿ ವಂಚನೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ರಾಧಿಕಾ ಕುಮಾರಸ್ವಾಮಿ ಅವರನ್ನ ಕರೆಯಿಸಿಕೊಳ್ಳಲಾಗಿತ್ತು. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ ಸಂದರ್ಭದಲ್ಲಿ ಅವರು ಯಾರು ಅಂತಾನೇ ಗೊತ್ತಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಎಲ್ಲೆಡೆಯಿಂದ ತೀವ್ರ ಟೀಕೆಯೂ ವ್ಯಕ್ತವಾಗಿತ್ತು. 

ಸೋಷಿಯಲ್ ಮೀಡಿಯಾದಲ್ಲಿ ಕಟ್ಟಿಕೊಂಡು ಪತ್ನಿ ಬಗ್ಗೆ ಹೀಗೆ ಹೇಳಿದರೆ, ರಾಜ್ಯದ ಜನರಿಗೆ ಇನ್ನು ಹೇಗೆ ಗೌರವ ಕೊಡಬಲ್ಲರೆಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರಿಂದ ಕುಮಾರಸ್ವಾಮಿ ತೀವ್ರ ಮುಜುಗರಕ್ಕೆ ಒಳಗಾಗಿದ್ದರು. 

‘ಪಂಚ​ರತ್ನ’ ಅಸ್ತ್ರದೊಂದಿಗೆ ಪಕ್ಷ ಸಂಘಟನೆ: ಕುಮಾರಸ್ವಾಮಿ

ಆದರೆ, ಕುಮಾರಸ್ವಾಮಿ ಇಂದು ರಾಮನಗರದಲ್ಲಿ ಚಾಮುಂಡೇಶ್ವರಿ ದೇವಿಗೆ ಕುಮಾರಸ್ವಾಮಿ ತಪ್ಪು ಕಾಣಿಕೆಯನ್ನ ಅರ್ಪಿಸಿದ್ದಾರೆ. ಈ ಹಿಂದೆ ದೇವಸ್ಥಾನದ ಮುಂದೆ ಬಾಷಣ ಮಾಡುವಾಗ ನನಗೆ ಯಾವುದೇ ಅಧಿಕಾರ ಬೇಡ ಎಂದು ಹೇಳಿದ್ದರು. 

ಇದಾದ ಬಳಿಕ ಕುಮಾರಸ್ವಾಮಿ ಎರಡು ಬಾರಿ ಸಿಎಂ ಆದರೂ ಅರ್ಧಕ್ಕೆ ಅಧಿಕಾರ ಕಳೆದುಕೊಂಡಿದ್ದರು. ಆ ಕಾರಣಕ್ಕಾಗಿ ಕುಮಾರಸ್ವಾಮಿ ಇಂದು ದೇವರಿಗೆ ತಪ್ಪು ಕಾಣಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಪತ್ನಿ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್ ಹಾಗೂ ಸೊಸೆ ರೇವತಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ 101 ರುಪಾಯಿ ತಪ್ಪು ಕಾಣಿಕೆಯನ್ನ ನೀಡಿದ್ದಾರೆ. 
 

Follow Us:
Download App:
  • android
  • ios