ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಲ್ಲೆದೇವಪುರ ಹಾಗೂ ಬಸಪ್ಪನಟ್ಟಿ ಗ್ರಾಮಗಳ ನಡುವೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಘಟನೆ 

ದಾವಣಗೆರೆ(ನ.27): ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ವಾಸುದೇವನ್ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಲ್ಲೆದೇವಪುರ ಹಾಗೂ ಬಸಪ್ಪನಟ್ಟಿ ಗ್ರಾಮಗಳ ನಡುವೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ. 

Add Asianetnews Kannada as a Preferred SourcegooglePreferred

ಪುತ್ರ, ಇಬ್ಬರು ವಿದ್ಯಾರ್ಥಿನಿಯರ ಜೊತೆ ವಾಸುದೇವನ್ ಅವರು ಪ್ರಯಾಣಿಸುತ್ತಿದ್ದ ವೇಳೆ ಅಪರಿಚಿತ ವಾಹನ‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿದ ವಾಸುದೇವನ್ ಸಾವನ್ನಪ್ಪಿದ್ದು ಮೂವರಿಗೆ ಗಾಯಗಳಾಗಿವೆ. 

Uttara Kannada : ಹಂಫ್ಸ್‌ ರಹಿತ ಸರ್ವಿಸ್‌ ರಸ್ತೆ: ಅಪಘಾತ ಸಂಖ್ಯೆ ಹೆಚ್ಚಳ

ಗಾಯಾಳುಗಳನ್ನ ದಾವಣಗೆರೆ ಜಿಲ್ಲೆಯ ಜಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಸುದೇವನ್ ಅವರ ಪುತ್ರ ಹಾಗೂ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ‌ಗಳಾಗಿವೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.