Asianet Suvarna News Asianet Suvarna News

Hampi Utsav: ಜನವರಿ 27 ರಂದು ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಚಾಲನೆ: ಸಚಿವೆ ಶಶಿಕಲಾ ಜೊಲ್ಲೆ

ಕೊರೊನಾ ಬಳಿಕ ಹೆಚ್ಚು ಕಡಿಮೆ ಎರಡು ವರ್ಷಗಳ ನಂತರ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಜನವರಿ 27 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವೆ  ಶಶಿಕಲಾ ಜೊಲ್ಲೆ ಹೇಳಿದ್ದಾರೆ.

Hampi Utsav on January 27th says  Minister Sasikala Jolle at belagavi rav
Author
First Published Dec 28, 2022, 8:14 PM IST

ವರದಿ : ನರಸಿಂಹ ಮೂರ್ತಿ ಕುಲಕರ್ಣಿ

ಬಳ್ಳಾರಿ / ಬೆಳಗಾವಿ ಡಿ.28: ಕೊರೊನಾ ಬಳಿಕ ಹೆಚ್ಚು ಕಡಿಮೆ ಎರಡು ವರ್ಷಗಳ ನಂತರ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಜನವರಿ 27 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಸಂಸ್ಥೆಗಳ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಬೆಳಗಾವಿ(Belagavi)ಯ ಸುವರ್ಣಸೌಧ(Suvarnasoudha)ದಲ್ಲಿ ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವೆ ಶಶಿಕಲಾ(Shashikala jolle)  ಹಂಪಿ ಉತ್ಸವ(Hampi Utsav)ದ ಸಿದ್ದತೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.  ಕೋವಿಡ್ ನಂತರ ಮತ್ತು ವಿಜಯನಗರ ಜಿಲ್ಲೆ ಹೊಸದಾಗಿ ನಿರ್ಮಾಣವಾದ ನಂತರ ನಡೆಸುತ್ತಿರುವ ಹಂಪಿ ಉತ್ಸವ ಇದಾಗಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಅದ್ದೂರಿಯಾಗಿ ಉತ್ಸವ ಆಚರಣೆಗೆ ಸೂಚನೆ ನೀಡಲಾಗಿದ್ದು ಅಗತ್ಯ ಸಿದ್ದತೆಗಳನ್ನು ಚುರುಕುಗೊಳಿಸುವಂತೆ ಇಂದು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗೆ ಸಚಿವರು ಸೂಚನೆ ನೀಡಿದರು. 

 

Hampi Utsav: ಜನವರಿ ತಿಂಗಳಾಂತ್ಯಕ್ಕೆ 3 ದಿನಗಳ ಕಾಲ ಹಂಪಿ ಉತ್ಸವ: ಸಚಿವೆ ಶಶಿಕಲಾ ಜೊಲ್ಲೆ

ಮುಖ್ಯಮಂತ್ರಿಗಳಿಂದ ಉದ್ಘಾಟನೆ: ಕಳೆದ ಬಾರಿ ವಿಜಯನಗರ(Vijayanagara) ಜಿಲ್ಲೆಯಲ್ಲಿ ನಡೆಸಿದ ಸಭೆಯಲ್ಲಿ ಜನವರಿ 27, 28 ಮತ್ತು 29 ರಂದು ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ‌ಆದ್ರೇ ಅದಕ್ಕೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ(CM Basavaraj bommai) ಒಪ್ಪಿಗೆ ಸೂಚಿಸಿರಲಿಲ್ಲ ಇದೀಗ ಅವರೊಂದಿಗೆ ಚರ್ಚಿಸಿದ್ದು, ಜನವರಿ 27 ರಂದು ಉದ್ಘಾಟನೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.

ದಸರಾ ಮಾದರಿಯ ದೀಪಾಲಂಕಾರ: ದಸರಾ ಮಾದರಿಯಲ್ಲಿ ಹಂಪಿ ಹಾಗೂ ಹೊಸಪೇಟೆಯಲ್ಲಿ ದೀಪದ ಆಲಂಕಾರ ಮಾಡುವ ಬಗ್ಗೆ ವಿಸ್ತ್ರುತವಾಗಿ ಚರ್ಚಿಸಲಾಯಿತು. ಹೊಸದಾಗಿ ದೀಪಾಲಂಕಾರ ಸಮಿತಿಯನ್ನು ರಚನೆ ಮಾಡಲಾಗಿದ್ದು ಸದರಿ ಸಮಿತಿಯ ಸದಸ್ಯರು ಹೊಸಪೇಟೆ, ಕಮಲಾಪುರ, ಹಂಪಿ ಈ ಮೂರು ಸ್ಥಳಗಳ ಮುಖ್ಯ ರಸ್ತೆಗಳ ಪ್ರಮುಖ ಸ್ಥಳಗಳಲ್ಲಿ ವಿಶೇಷ ದೀಪಾಲಂಕಾರ ಮಾಡಲು ಯೋಜನೆ ತಯಾರಿಸಿ ಪ್ರಸ್ತುತ ಪಡಿಸಲು ಸೂಚನೆ ನೀಡಲಾಗಿದೆ.

ಸ್ಥಳೀಯ ಕಲಾತಂಡಗಳಿಗೆ ಹೆಚ್ಚಿನ ಆದ್ಯತೆ: ಹಂಪಿ ಉತ್ಸವದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡುವಂತೆ ಕೋರಿ ಸುಮಾರು 1036 ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳ ಆಯ್ಕೆಗೆ ಸಮಿತಿಯನ್ನು ರಚಿಸಲಾಗಿದ್ದು ಇದುವರೆಗೂ ಅವಕಾಶ ಸಿಗದ ಸ್ಥಳೀಯ ಕಲಾವಿದರುಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಿದೆ.

ಕಾನೂನು ಸುವ್ಯವಸ್ಥೆಗೆ ಅಗತ್ಯ ತಯಾರಿ: ಲಕ್ಷಾಂತರ ಜನರು ಸೇರುವ ಈ ಉತ್ಸವದಲ್ಲಿ ಅಗತ್ಯ ಕಾನೂನು ಸುವ್ಯವಸ್ಥೆಗೆ ವ್ಯವಸ್ಥೆ ಮಾಡಬೇಕು. ಹಂಪಿ ಪ್ರದೇಶದಲ್ಲಿ ಸಂಪೂರ್ಣ ಸಿ.ಸಿ ಟಿವಿಗಳನ್ನು ಅಳವಡಿಸಬೇಕು. ಹಂಪಿಗೆ ಹೋಗುವ ಮಾರ್ಗವಾದ ಕಡ್ಡಿರಾಂಪುರ ಸ್ವಾಗತ ಕಮಾನಿನಿಂದ ಕಡ್ಡಿರಾಂಪೂರ, ಕಷ್ಣ ದೇವಸ್ಥಾನ, ಉದ್ದಾನ ವೀರಭದ್ರೇಶ್ವರ ದೇವಸ್ಥಾನದ ಮಾರ್ಗದ ಮೂಲಕ ಕಮಲಾಪುರದವರೆಗೆ ಏಕಮುಖ ಮಾರ್ಗ ಸಂಚಾರ ವ್ಯವಸ್ಥೆ ಮಾಡುವುದು. ಹಂಪಿ ಪ್ರದೇಶದಲ್ಲಿ ಅವಶ್ಯವಿದ್ದ ಕಡೆಗಳಲ್ಲಿ ಶಾಶ್ವತವಾಗಿ ಸಂಚಾರ ಸೂಚನಾ ಫಲಕಗಳನ್ನು ಅಳವಡಿಸಿ ಸುವ್ಯವಸ್ಥಿತ ವಾಹನ ನಿಲುಗಡೆಗೆ ಅವಕಾಶ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.   

 Ballari Utsav: ವಿಜಯನಗರ ಜಿಲ್ಲೆ ವಿಭಜನೆ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿ ಉತ್ಸವ

ಹೊಸಪೇಟೆಯಲ್ಲಿ‌‌ ಅದ್ಧೂರಿ ಮೆರವಣಿಗೆ

ರಾಜ್ಯ ಮತ್ತು ರಾಷ್ಟ್ರಮಟ್ಟದ ಕಲಾತಂಡಗಳಿಂದ ಹೊಸಪೇಟೆ ನಗರದಲ್ಲಿ ವಸಂತವೈಭವ ಮೆರವಣಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ತುಂಗಾನದಿಯ ತಟದಲ್ಲಿ ತುಂಗಾರತಿ, ವಿಜಯನಗರ ವೈಭವದ ಕುರಿತು ಸುಮಾರು 300 ಕಲಾವಿದರನ್ನೊಳಗೊಂಡ ಧ್ವನಿ ಮತ್ತು ಬೆಳಕು ಕಾರ್ಯಕ್ರಮ, ಹಂಪಿ ಬೈ ಸ್ಕೈ, ವಿಭಿನ್ನ ರೀತಿಯ ಫಲಪುಷ್ಪ ಪ್ರದರ್ಶನ, ಅಶ್ವದಳ ಪ್ರದರ್ಶನ, ಕುಸ್ತಿ ಹಾಗೂ ಇತರೆ ಗ್ರಾಮೀಣ ಕ್ರೀಡೆಗಳ ಪ್ರದರ್ಶನಗಳನ್ನು ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Follow Us:
Download App:
  • android
  • ios