ರೈತ ಪ್ರತಿಭಟನೆ ಸಂದರ್ಭದಲ್ಲಿ ಎಸ್ಪಿ ಶ್ರೀನಿವಾಸಗೌಡರೂ ‘ಅನ್ನದಾತನಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು. ಅವರ ಜೊತೆಯಿದ್ದ ಪೊಲೀಸ್‌ ಸಿಬ್ಬಂದಿಯೂ ಇದಕ್ಕೆ ದನಿಗೂಡಿಸಿದರು.

ಹಾಸನ (ಫೆ.07): ರಸ್ತೆ ತಡೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮನವೊಲಿಸುವ ವೇಳೆ ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಅವರು ಅನ್ನದಾತನಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚುಕಾಲ ಹೆಚ್ಚು ಕಾಲ ರಸ್ತೆತಡೆ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರಿಂದ ಬೇಗನೆ ನಿಲ್ಲಿಸುವಂತೆ ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿದರು. 

ರೈತ ಹೋರಾಟದಲ್ಲಿ ವಿದೇಶಿ ಪಿತೂರಿ ಬಟಾ ಬಯಲು; ತನಿಖಾ ಸಂಸ್ಥೆಗಳಿಂದ ಮಾಹಿತಿ! ...

ಆದರೆ ರೈತ ಸಂಘದ ಕಾರ್ಯಕರ್ತರು ಮಧ್ಯಾಹ್ನ ರಸ್ತೆ ಮಧ್ಯೆಯೇ ಕುಳಿತು ಮುದ್ದೆ ಊಟ ಮಾಡಿದ ನಂತರವೇ ತಮ್ಮ ಹೋರಾಟ ನಿಲ್ಲಿಸುವುದಾಗಿ ಹೇಳಿದರು. 

ಈ ಸಂದರ್ಭದಲ್ಲಿ ಎಸ್ಪಿ ಶ್ರೀನಿವಾಸಗೌಡರೂ ‘ಅನ್ನದಾತನಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು. ಅವರ ಜೊತೆಯಿದ್ದ ಪೊಲೀಸ್‌ ಸಿಬ್ಬಂದಿಯೂ ಇದಕ್ಕೆ ದನಿಗೂಡಿಸಿದರು.