ರೈತ ಪ್ರತಿಭಟನೆ ಸಂದರ್ಭದಲ್ಲಿ ಎಸ್ಪಿ ಶ್ರೀನಿವಾಸಗೌಡರೂ ‘ಅನ್ನದಾತನಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು. ಅವರ ಜೊತೆಯಿದ್ದ ಪೊಲೀಸ್‌ ಸಿಬ್ಬಂದಿಯೂ ಇದಕ್ಕೆ ದನಿಗೂಡಿಸಿದರು.

ಹಾಸನ (ಫೆ.07): ರಸ್ತೆ ತಡೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮನವೊಲಿಸುವ ವೇಳೆ ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಅವರು ಅನ್ನದಾತನಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. 

Add Asianetnews Kannada as a Preferred SourcegooglePreferred

ಹೆಚ್ಚುಕಾಲ ಹೆಚ್ಚು ಕಾಲ ರಸ್ತೆತಡೆ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರಿಂದ ಬೇಗನೆ ನಿಲ್ಲಿಸುವಂತೆ ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿದರು. 

ರೈತ ಹೋರಾಟದಲ್ಲಿ ವಿದೇಶಿ ಪಿತೂರಿ ಬಟಾ ಬಯಲು; ತನಿಖಾ ಸಂಸ್ಥೆಗಳಿಂದ ಮಾಹಿತಿ! ...

ಆದರೆ ರೈತ ಸಂಘದ ಕಾರ್ಯಕರ್ತರು ಮಧ್ಯಾಹ್ನ ರಸ್ತೆ ಮಧ್ಯೆಯೇ ಕುಳಿತು ಮುದ್ದೆ ಊಟ ಮಾಡಿದ ನಂತರವೇ ತಮ್ಮ ಹೋರಾಟ ನಿಲ್ಲಿಸುವುದಾಗಿ ಹೇಳಿದರು. 

ಈ ಸಂದರ್ಭದಲ್ಲಿ ಎಸ್ಪಿ ಶ್ರೀನಿವಾಸಗೌಡರೂ ‘ಅನ್ನದಾತನಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು. ಅವರ ಜೊತೆಯಿದ್ದ ಪೊಲೀಸ್‌ ಸಿಬ್ಬಂದಿಯೂ ಇದಕ್ಕೆ ದನಿಗೂಡಿಸಿದರು.