ತ್ರಿಪುರಾದ ಗಡಿಯಲ್ಲಿ ಅನಾರೋಗ್ಯದಿಂದ ಸಿಆರ್ಪಿಎಫ್ ಯೋಧ ಸಾವು| ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಯೋಧ ಸುರೇಶ ಉಡಚಪ್ಪ ಹಾವನೂರ| ಮೃತ ಯೋಧ ಸುರೇಶ ಉಡಚಪ್ಪ ಹಾವನೂರ ಸಿಆರ್ಪಿಎಫ್ನ 71ನೇ ಬಟಾಲಿಯನ್ಯಲ್ಲಿ ಸೇವೆ ಸಲ್ಲಿಸುತ್ತಿದ್ದರು| ಕಳೆದ 20 ವರ್ಷಗಳ ಹಿಂದೆಯೇ ಸಿಆರ್ಪಿಎಫ್ಗೆ ಸೇರಿಕೊಂಡಿದ್ದರು|
ಬ್ಯಾಡಗಿ(ಮೇ.02): ಅನಾರೋಗ್ಯದಿಂದ ಬಳಲುತ್ತಿದ್ದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಸಿಆರ್ಪಿಎಫ್ ಯೋಧ ಸುರೇಶ ಉಡಚಪ್ಪ ಹಾವನೂರ (43) ತ್ರಿಪುರಾದ ಗಡಿಯಲ್ಲಿ ನಾಲ್ಕು ದಿನದ ಹಿಂದೇ ಮೃತಪಟ್ಟಿದ್ದು ಶನಿವಾರ(ಇಂದು) ಪಾರ್ಥಿವ ಶರೀರ ತವರಿಗೆ ಬರಸಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೃತ ಯೋಧ ಸುರೇಶ ಉಡಚಪ್ಪ ಹಾವನೂರ ಅವರು ಸಿಆರ್ಪಿಎಫ್ನ 71ನೇ ಬಟಾಲಿಯನ್ಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ 20 ವರ್ಷಗಳ ಹಿಂದೆಯೇ ಸಿಆರ್ಪಿಎಫ್ಗೆ ಸೇರಿಕೊಂಡಿದ್ದಾಗಿ ತಿಳಿದು ಬಂದಿದೆ.
ನಕಲಿ ಬೀಜ ಮಾರಾಟ ಹಗರಣ: ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೆ ಕ್ರಮ, ಸಚಿವ ಪಾಟೀಲ
ಇಂದು(ಶನಿವಾರ) ಮೋಟೆಬೆನ್ನೂರಿಗೆ ಪಾರ್ಥಿವ ಶರೀರ ಆಗಮಿಸಲಿದ್ದು ಸರ್ಕಾರಿ ಗೌರವದೊಂದಿಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. ಮೃತ ಯೋಧನನಿಗೆ ಪತ್ನಿ, ಓರ್ವ ಪುತ್ರಿ ಇದ್ದಾರೆ.
