ಜಗನ್ನಾಥ ನಾಯ್ಕ ಅವರ ಪುತ್ರಿ ಕೃತಿಕಾಗೆ ಕೈಗಾ ಅಣು ವಿದ್ಯುತ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಚ್ಇಎಲ್ ಕಂಪನಿಯಲ್ಲಿ ಉದ್ಯೋಗ ಒದಗಿಸಲಾಗಿದೆ. ಈ ವಿಷಯವನ್ನು ಕುಮಾರಸ್ವಾಮಿ ಖಚಿತಪಡಿಸಿದ್ದು, ಕಂಪನಿ ಸಹ ನೌಕರಿ ಕೊಟ್ಟ ಬಗ್ಗೆ ದೃಢಪಡಿಸಿದೆ. 

ಕಾರವಾರ(ಸೆ.11): ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿರುವ ಜಗನ್ನಾಥ ನಾಯ್ಕ ಪುತ್ರಿಗೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೈಗಾದ ಕಂಪನಿಯೊಂದರಲ್ಲಿ ಉದ್ಯೋಗ ಕೊಡಿಸಿದ್ದಾರೆ. 

Add Asianetnews Kannada as a Preferred SourcegooglePreferred

ಜಗನ್ನಾಥ ನಾಯ್ಕ ಅವರ ಪುತ್ರಿ ಕೃತಿಕಾಗೆ ಕೈಗಾ ಅಣು ವಿದ್ಯುತ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಚ್ಇಎಲ್ ಕಂಪನಿಯಲ್ಲಿ ಉದ್ಯೋಗ ಒದಗಿಸಲಾಗಿದೆ. ಈ ವಿಷಯವನ್ನು ಕುಮಾರಸ್ವಾಮಿ ಖಚಿತಪಡಿಸಿದ್ದು, ಕಂಪನಿ ಸಹ ನೌಕರಿ ಕೊಟ್ಟ ಬಗ್ಗೆ ದೃಢಪಡಿಸಿದೆ. 

ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ಲಾರಿ ಜಾಕ್‌ ಪತ್ತೆ

ಶಿರೂರು ಗುಡ್ಡಕುಸಿತ ವೀಕ್ಷಣೆಗೆ ಎಚ್‌.ಡಿ.ಕುಮಾರಸ್ವಾಮಿ ಆಗಮಿಸಿದಾಗ ಜಗನ್ನಾಥ ನಾಯ್ಕ ಪುತ್ರಿಗೆ ಉದ್ಯೋಗದ ಭರವಸೆ ನೀಡಿದ್ದರು. ಜಗನ್ನಾಥ ನಾಯ್ಕ ಅವರ ಇನ್ನೊಬ್ಬ ಪುತ್ರಿಗೆ ಕಳೆದವಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ರಾಜ್ಯ ಸರ್ಕಾರ ಉದ್ಯೋಗ ಕಲ್ಪಿಸಿತ್ತು.