ಡಿಸಿಎಂ ಅಶ್ವತ್ಥ್ ನಾರಾಯಣ ಹುಡುಗಾಟ ಬಿಡ್ಬೇಕು: ಎಚ್ಡಿಕೆ
ಬೇರೆಯವರ ಬಗ್ಗೆ ಲಘುವಾಗಿ ಮಾತನಾಡುವುದು ಹಾಗೂ ಹುಡುಗಾಟಿಕೆ ಹೇಳಿಕೆ ನೀಡುವುದನ್ನು ಬಿಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿರವರು ಉಪಮುಖ್ಯಮಂತ್ರಿ ಅಶ್ವತ್್ಥ ನಾರಾಯಣ ವಿರುದ್ಧ ಕಿಡಿಕಾರಿದ್ದಾರೆ.
ರಾಮನಗರ(ಏ.25): ಪಾದರಾಯನಪುರ ಗಲಾಟೆ ಪ್ರಕರಣದ ಆರೋಪಿಗಳನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ತಪ್ಪು ಮಾಡಿದೆ. ಪಶ್ಚಾತಾಪ ಪಟ್ಟು ಮಾಡಿದ ತಪ್ಪನ್ನು ಸರಿಪಡಿಸಿಕೊಳ್ಳಿ. ಬೇರೆಯವರ ಬಗ್ಗೆ ಲಘುವಾಗಿ ಮಾತನಾಡುವುದು ಹಾಗೂ ಹುಡುಗಾಟಿಕೆ ಹೇಳಿಕೆ ನೀಡುವುದನ್ನು ಬಿಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿರವರು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ವಿರುದ್ಧ ಕಿಡಿಕಾರಿದರು.
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ರಾಮನಗರದ ಕಾರಾಗೃಹದ ಬಳಿ ಜನರಿಂದ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಡಿಸಿಎಂ ಅಶ್ವತ್ಥ್ ನಾರಾಯಣ ಅವರು ಎಚ್ಚರಿಕೆಯಿಂದ ಹೇಳಿಕೆ ನೀಡಬೇಕು. ಯಾರ ಬಗ್ಗೆಯೂ ಲಘುವಾಗಿ ಮಾತನಾಡಬಾರದು ಎಂದರು.
ಮಾಡಿದ ತಪ್ಪು ಸರಿಪಡಿಸಿಕೊಳ್ಳಿ
ಆರೋಪಿಗಳ ಸ್ಥಳಾಂತರಿಸಿದ್ದು ತಪ್ಪು. ನೀವು ತಪ್ಪು ಮಾಡಿಕೊಂಡಿದ್ದೀರಿ. ತಪ್ಪು ಮಾಡಿಕೊಂಡ ಮೇಲೆ ಪಶ್ಚಾತಾಪ ಪಟ್ಟು ಸರಿ ಪಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಇಂತಹ ಪರಿಸ್ಥಿತಿಯಲ್ಲಿ ತಪ್ಪಾಗಿರುವುದನ್ನೇ ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ. ಇದು ರಾಜಕೀಯ ಮಾಡುವ ಸಮಯ ಅಲ್ಲ ಎಂದು ಹೇಳಿದರು.
ಬಹುದಿನಗಳ ರೈತರ ಕನಸು ನನಸು: ಏಷ್ಯಾದಲ್ಲಿಯೇ ಅತ್ಯಂತ ಉದ್ದದ ಜಲಸೇತುವೆ ಲೋಕಾರ್ಪಣೆ
ಪರಪ್ಪನ ಅಗ್ರಹಾರದಿಂದ ರಾಮನಗರ ಕಾರಾಗೃಹಕ್ಕೆ ಆರೋಪಿಗಳನ್ನು ಸ್ಥಳಾಂತರ ಮಾಡುವುದು ವಿವೇಕ ರಹಿತ ನಿರ್ಧಾರ, ಮುಂದಾಗುವ ಅನಾಹುತಗಳಿಗೆ ಹೊಣೆ ಆಗಬೇಕಾಗುತ್ತದೆ ಎಂದು ರಾಜ್ಯಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೆ. ಈ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಗೃಹ ಇಲಾಖೆ ಕಾರ್ಯದರ್ಶಿಗಳು ಭರವಸೆ ನೀಡಿದ್ದರು. ಆದರೆ, ನಮ್ಮ ಸಲಹೆಯನ್ನು ಧಿಕ್ಕರಿಸಿದ ಪರಿಣಾಮ ರಾಮನಗರದಲ್ಲಿ ಸಮಸ್ಯೆ ಉದ್ಭವ ಆಗಿದೆ ಎಂದರು.
ಐವರು ಆರೋಪಿಗಳಿಗೆ ಸೋಂಕು
ಕಾರಾಗೃಹದಲ್ಲಿರುವ ಐದು ಮಂದಿ ಆರೋಪಿಗಳಲ್ಲಿ ಕೊರೋನಾ ಸೋಂಕು ಪಾಸಿಟಿವ್ ಬಂದಿದೆ. ಈಗ ಕಾರಾಗೃಹದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಳ ಹಂತದ ಸಿಬ್ಬಂದಿಯ ಕುಟುಂಬ ಪರಿಸ್ಥಿತಿ ಏನಾಗಬೇಕು.
ಡೆಡ್ಲಿ ಕೊರೋನಾ ವೈರಸ್ ವಿರುದ್ಧ ಹೋರಾಡಿ ಗೆದ್ದು ಬಂದ ಅಜ್ಜಿಯರು..!
ಸುಮಾರು 30 ರಿಂದ 35 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಚರ್ಚೆ ನಡೆಸಿದ್ದೇನೆ. ಸರ್ಕಾರದ ವತಿಯಿಂದ ತಪ್ಪಾಗಿದ್ದರು ಸಹ ಅಧಿಕಾರಿಗಳು ತಮ್ಮ ಮಿತಿಯಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.