ಸದ್ಯ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಇದ್ದು ಶೀಘ್ರ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಸ್ವಾಮೀಜಿ ಓರ್ವರು ಭವಿಷ್ಯ ನುಡಿದಿದ್ದಾರೆ
ಚನ್ನಪಟ್ಟಣ [ಮಾ.06]: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ ಎಂದು ನಂಜಾವಧೂತ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
Add Asianetnews Kannada as a Preferred Source

ಗುರುವಾರ ಇಲ್ಲಿ ನಡೆದ ಬಮೂಲ್ ಉತ್ಸವದಲ್ಲಿ ಆಶೀರ್ವಚನ ನೀಡಿದ ಅವರು, ಅಧಿಕಾರದಲ್ಲಿದ್ದಾಗ ಕುಮಾರಸ್ವಾಮಿ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದರು.
ಆದರೆ, ಅವರ ಜನಪರ ಕಾರ್ಯಕ್ರಮಗಳಿಗೆ ಸರಿಯಾದ ಪ್ರಚಾರ ಸಿಕ್ಕಿಲ್ಲ. ಅವರ ನಾಯಕತ್ವ ಈ ನಾಡಿಗೆ ಬೇಕಿದೆ. ಆದರೆ ಇದೀಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದು, ಕುಮಾರಸ್ವಾಮಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಕೈಹಾಕುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೋದಿ ಪ್ರಸ್ತಾಪಿಸಿ ಬಿಎಸ್ವೈ ಬಜೆಟನ್ನು ಟೀಕಿಸಿದ ಎಚ್ಡಿಕೆ!...
ಈ ಹಿಂದೆಯೂ ಅನೇಕ ಸ್ವಾಮೀಜಿಗಳು ಈ ರೀತಿ ಭವಿಷ್ಯ ನುಡಿದಿದ್ದರು.
