ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮಲೆನಾಡು ಪ್ರದೇಶಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಿದೆ. 

ಶಿವಮೊಗ್ಗ (ಸೆ.20): ಮಲೆನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ತತ್ತರಿಸಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಹೆಚ್ಚಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು, ಒಟ್ಟು 50 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಈ ಬಗ್ಗೆ ಬಿಆರ್‌ಪಿ ಎಇಇ ಮಂಜುನಾಥ್ ಮಾಹಿತಿ ನೀಡಿದ್ದು, ಈ ಮೊದಲು ಕ್ರಸ್ಟ್ ಗೇಟ್ ಮೂಲಕ 10 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲಾಗಿದ್ದು, ಮತ್ತೆ 30 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ ಎಂದು ಹೇಳಿದ್ದಾರೆ. 

ಭಾರೀ ಮಳೆ : ಕೃಷ್ಣ ಮಠಕ್ಕೆ ನುಗ್ಗಿದ ನೀರು, ಪ್ರವಾಹ ಸದೃಶ ವಾತಾವರಣ

 ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಮತ್ತೆ 45 ಸಾವಿರ ಕ್ಯೂಸೆಕ್ಸ್ ನೀರನ್ನು ಕ್ರಸ್ಟ್ ಗೇಟ್ ಮೂಲಕ ಬಿಡಲಾಗುತ್ತಿದೆ. ಇನ್ನು ಇದೇ ವೇಳೆಯಲ್ಲಿ 5 ಕ್ಯೂಸೆಕ್ ನೀರನ್ನು ಕೆನಾಲ್ ಮೂಲಕ ಹರಿಸಲಾಗುತ್ತಿದೆ ಎಂದರು. 

ಮಲೆನಾಡು ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 50 ಸಾವಿರ ನಿರು ಹರಿದು ಬಂದಿದೆ.

"