ದೈವಜ್ಞ ಕಲ್ಯಾಣ ಮಂಟಪ ಎದುರಿನ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಬಿ.ಆರ್.ಟಿ.ಎಸ್. ಕಾರಿಡಾರ್ ರಸ್ತೆಯನ್ನು ನೀರು ಆವರಿಸಿಕೊಂಡಿದೆ.  

ಧಾರವಾಡ(ಜೂ.07): ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗೆ ಮಳೆ ನೀರು ನುಗ್ತಿದ್ದರಿಂದ ವಾಹನಗಳು ನೀರಿನಲ್ಲೇ ನಿಂತ ಘಟನೆ ನಗರದಲ್ಲಿ ಇಂದು(ಶುಕ್ರವಾ) ನಡೆದಿದೆ. ನಗರದ ಎನ್.ಟಿ.ಟಿ.ಎಫ್ ಬಳಿಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಹರಿದಿದೆ. 

Add Asianetnews Kannada as a Preferred SourcegooglePreferred

ದೈವಜ್ಞ ಕಲ್ಯಾಣ ಮಂಟಪ ಎದುರಿನ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಬಿ.ಆರ್.ಟಿ.ಎಸ್. ಕಾರಿಡಾರ್ ರಸ್ತೆಯನ್ನು ನೀರು ಆವರಿಸಿಕೊಂಡಿದೆ. 

ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರೀ ಮಳೆ: ಡ್ಯಾಂಗಳಿಗೆ ಒಳಹರಿವು ಪ್ರಾರಂಭ

ನಿಂತ ನೀರಿನಲ್ಲಿಯೇ ವಾಹನಗಳು ನಿಧಾನವಾಗಿ ಚಲಿಸುತ್ತಿವೆ. ಮಳೆ ನೀರು ದಾಟಲು ಸರಿಯಾದ ವ್ಯವಸ್ಥೆ ಇಲ್ಲದ ಹಿನ್ನೆಲೆ ರಸ್ತೆಯಲ್ಲೇ ನೀರು ನಿಂತಿದೆ. ಮೇಲ್ಭಾಗದಿಂದ ಬಂದ ನೀರೆಲ್ಲ ರಸ್ತೆಯಲ್ಲೇ ಜಲಾವೃತವಾಗಿದೆ. ಇದರಿಂದ ಜನರು ಪಡಬಾರದ ಕಷ್ಟಗಳನ್ನ ಎದುರಿಸುತ್ತಿದ್ದಾರೆ.