ಮಳೆಗಾಲವಾಗಿದ್ದರೂ ರಾಜ್ಯದ ಹಲವು ಕಡೆ ಕುಡಿಯುವ ನೀಡಿಗೆ ಸಮಸ್ಯೆ ಇದ್ದು, ಬರಗಾಲ ಹಾಗೂ ಪ್ರಕೃತಿ ವಿಕೋಪಗಳನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಲ್ಪ್ಲೈನ್ ವ್ಯವಸ್ಥೆ ಮಾಡಲಾಗಿದೆ.
ತುಮಕೂರು(ಆ.01): ಮಳೆಗಾಲವಾಗಿದ್ದರೂ ರಾಜ್ಯದ ಹಲವು ಕಡೆ ಕುಡಿಯುವ ನೀಡಿಗೆ ಸಮಸ್ಯೆ ಇದ್ದು, ಬರಗಾಲ ಹಾಗೂ ಪ್ರಕೃತಿ ವಿಕೋಪಗಳನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಲ್ಪ್ಲೈನ್ ವ್ಯವಸ್ಥೆ ಮಾಡಲಾಗಿದೆ.
Add Asianetnews Kannada as a Preferred Source

ಇಲ್ಲಿನ ಉಪವಿಭಾಗ ವ್ಯಾಪ್ತಿಗೊಳಪಡುವ ತುಮಕೂರು, ಗುಬ್ಬಿ ಹಾಗೂ ಕುಣಿಗಲ್ ತಾಲೂಕುಗಳಲ್ಲಿ ಪ್ರಕೃತಿ ವಿಕೋಪ ಹಾಗೂ ಬರಗಾಲದ ಸಮರ್ಪಕ ನಿರ್ವಹಣೆಗಾಗಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಪ್ರಕೃತಿ ವಿಕೋಪ ಹಾಗೂ ಬರಗಾಲಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 0816-2278493ನ್ನು ಸಂಪರ್ಕಿಸಬಹುದೆಂದು ಉಪವಿಭಾಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
