ನಟ ಪ್ರಕಾಶ್ ರೈ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್| ಪ್ರಕಾಶ್ ರೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯಪೀಠ| 2019ರ ಲೋಕಸಭಾ ಚುನಾವಣೆ ವೇಳೆ ಎಂ.ಜಿ ರಸ್ತೆಯಲ್ಲಿ ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ್ದ ನಟ ಪ್ರಕಾಶ್ ರೈ|
ಬೆಂಗಳೂರು(ಅ.13): ಕಳೆದ ಲೋಕಸಭೆ ಚುನಾವಣೆಯ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸುವಂತೆ ಕೋರಿ ನಟ ಪ್ರಕಾಶ್ ರೈ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಕುರಿತು ಪ್ರಕಾಶ್ ರೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
ಮರಳಿ ಮಣ್ಣಿಗೆ: ಪ್ರಕಾಶ್ ರೈ ಲಾಕ್ಡೌನ್ ದಿನಗಳನ್ನು ಹೀಗೆ ಕಳೆಯುತ್ತಿದ್ದಾರೆ ನೋಡಿ!
2019ರ ಲೋಕಸಭಾ ಚುನಾವಣೆ ವೇಳೆ ಎಂ.ಜಿ ರಸ್ತೆಯಲ್ಲಿ ಅನುಮತಿ ಇಲ್ಲದೇ ನಟ ಪ್ರಕಾಶ್ ರೈ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಬಿಬಿಎಂಪಿ ಫ್ಲೈಯಿಂಗ್ ಸ್ಕ್ವಾಡ್ ಕೇಸ್ ದಾಖಲಿಸಿತ್ತು. ನಂತರ ತನಿಖೆ ನಡೆಸಿದ್ದ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು. ಆ ಪ್ರಕರಣ ರದ್ದು ಕೋರಿ ಪ್ರಕಾಶ್ ರೈ ಹೈಕೋರ್ಟ್ ಮೊರೆ ಹೋಗಿದ್ದರು.
