Asianet Suvarna News Asianet Suvarna News

ಪಿಎಲ್‌ಡಿ ಕ್ಯಾತೆ, ಲಕ್ಷ್ಮೀ ಹೆಬ್ಬಾಳ್ಕರ್ ಪರ ತೀರ್ಪು: ಏನಂದ್ರು ಸತೀಶ್!

ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ! ಅಡಳಿತ ಮಂಡಳಿಗೆ ಹೈ ಕೋರ್ಟ್ ಆದೇಶ! ಜಾರಕಿಹೊಳಿ ಬ್ರದರ್ಸ್ ವಿರುದ್ಧ ಹೆಬ್ಬಾಳ್ಕರ್​ಗೆ ಜಯ! ಸೆ.7 ರ ನಂತರವೇ ನಿರ್ಧಾರ ಎಂದ ಸತೀಶ್ ಜಾರಕಿಹೋಳಿ 
 

ಬೆಳಗಾವಿ(ಸೆ.5): ಬೆಳಗಾವಿ ಕಾಂಗ್ರೆಸ್ ಪಾಳಯದಲ್ಲಿ ನಾಯಕರ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿರುವ ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಬೇಕೆಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ನೀಡಿದ್ದು ಜಾರಕಿಹೊಳಿ ಬ್ರದರ್ಸ್​ಗೆ ತೀವ್ರ ಹಿನ್ನಡೆಯಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೋಳಿ, ಸೆ. ೭ ರಂದು ಚುನಾವಣೆ ನಡೆಯಲಿದ್ದು, ಅದರ ಬಳಿಕವಷ್ಟೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದ್ದಾರೆ.

ಸತೀಶ್ ಅವರ ಈ ಹೇಳಿಕೆ ತೀವ್ರ ಕುತೂಹಲ ಮೂಡಿಸಿದ್ದು, ಸೆ.೭ ರ ನಂತರ ರಾಜ್ಯ ರಾಜಕೀಯದಲ್ಲಿ ಏನು ಬದಲಾವಣೆಗಳು ಆಗಲಿವೆ ಎಂಬ ಕುತೂಹಲ ಮೂಡಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories