*  'ಆಲ್ ಅಸೆಂಬ್ಲಿ ಆಫ್ ಗಾಡ್' ಚರ್ಚ್‌ನಲ್ಲಿ ಗಲಾಟೆ*  ಪ್ರಾರ್ಥನೆ ಹೆಸರಲ್ಲಿ ಹಿಂದೂಗಳನ್ನ ತಂದು ಮತಾಂತರ*  ಪಾದ್ರಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ  

ಹುಬ್ಬಳ್ಳಿ(ಅ.17):  ಕ್ರೈಸ್ತ ಸಮುದಾಯದವರಿಂದ(Christian community) ಮತಾಂತರ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು(Hindu Activists) ಚರ್ಚ್‌ಗೆ ನುಗ್ಗಿದ ಘಟನೆ ಭೈರಿದೇವರಕೊಪ್ಪದ 'ಆಲ್ ಅಸೆಂಬ್ಲಿ ಆಫ್ ಗಾಡ್' ಚರ್ಚ್‌ನಲ್ಲಿ ಇಂದು(ಭಾನುವಾರ) ನಡೆದಿದೆ.

Add Asianetnews Kannada as a Preferred SourcegooglePreferred

ಪ್ರಾರ್ಥನೆ(Prayer) ಹೆಸರಲ್ಲಿ ಹಿಂದೂಗಳನ್ನ ತಂದು ಮತಾಂತರ(Conversion) ಗೊಳಿಸಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿದೆ. ಆಕ್ರೋಷಗೊಂಡ ಹಿಂದೂ ಸಂಘಟನೆಗಳ ಕಾರ್ಯಕರ್ತರು ಚರ್ಚ್‌(Church) ಹೊರಗಡೆ ಕುಳಿತು ಭಜನೆ ಮಾಡಲು ಆರಂಭಿಸಿದ್ದಾರೆ. 

ಮತಾಂತರಗೊಂಡಿದ್ದ 4 ಕುಟುಂಬಗಳು ಗೂಳಿಹಟ್ಟಿ ಶೇಖರ್ ನೇತೃತ್ವದಲ್ಲಿ ಘರ್​ ವಾಪಸಿ

ಈ ವೇಳೆ ಪಾದ್ರಿ(Pastor) ಮತ್ತು ಹಿಂದೂ(Hindu) ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ನವನಗರದ ಎಪಿಎಂಸಿ ಠಾಣೆ ಪೊಲೀಸರು(Police) ಆಗಮಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ.