ಹಿಂದೂ ಸಂಘಟನೆಗಳು ಹಾಗೂ ಭಜರಂಗದಳದ ಕಾರ್ಯಕರ್ತರು ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳನ್ನು ರಕ್ಷಿಸಿದ್ದಾರೆ. 

ಚಿತ್ರದುರ್ಗ (ಜ.30): ಕಸಾಯಿಖಾನೆಗೆ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಜಾನುವಾರುಗಳನ್ನು ಭಜರಂಗದಳ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಕೃೀ ಮಾರುಕಟ್ಟೆ ಬಳಿಯಲ್ಲಿ ಲಾರಿಯಲ್ಲಿ ಕಸಾಯಿಖಾನೆಗೆ ಸಾಗಿಸುವಾಗ 19 ಕರುಗಳು ಹಾಗೂ 2 ಹಸುಗಳನ್ನು ರಕ್ಷಣೆ ಮಾಡಲಾಗಿದೆ. 

ಕಸಾಯಿ ಖಾನೆಗೆ ಸಾಗಿಸುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಲಾರಿಯನ್ನು ತಡೆದು ಎಲ್ಲಾ ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. 

ಗರ್ಭಧರಿಸಿದ್ರು ಬಿಡದೇ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದವ ಅರೆಸ್ಟ್..

ಬಳಿಕ ಈ ಬಗ್ಗೆ ಹೊಸದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಸು ಕರುಗಳನ್ನು ವಶಕ್ಕೆ ಪಡೆದಿದ್ದಾರೆ.