ಕೆಎಸ್ಆರ್ಪಿ ಪೇದೆಯೊಬ್ಬನಿಗೆ ಕಾಣಿಸಿಕೊಂಡ ಕೆಮ್ಮು, ನೆಗಡಿ, ಜ್ವರ| ತುಕಡಿಯಲ್ಲಿದ್ದ ಇನ್ನುಳಿದ 24 ಮಂದಿ ಕ್ವಾರಂಟೈನ್ಗೆ| ಕೆಎಸ್ಆರ್ಪಿ ತುಕಡಿಯವರಿಗೆ ವಸತಿ ವ್ಯವಸ್ಥೆ ಮಾಡಿರುವುದಕ್ಕೆ ಸಮೀಪದ ಪೊಲೀಸ್ ಕ್ವಾಟ್ರರ್ಸ್ ನಿವಾಸಿಗಳ ಆಕ್ಷೇಪ|
ಈ ಮೂಲಕ ಇಡೀ ತುಕಡಿಯನ್ನು ಕ್ವಾರಂಟೈನ್ ಮಾಡಿದಂತಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಗೆ ಬಳ್ಳಾರಿಯಿಂದ ಎರಡು ಕೆಎಸ್ಆರ್ಪಿ ತುಕಡಿಯ 25 ಮಂದಿ ಬಂದೋಸ್ತ್ಗಾಗಿ ಆಗಮಿಸಿದ್ದರು. ಆ ಪೈಕಿ ಒಬ್ಬರಿಗೆ ಸೋಮವಾರ ರಾತ್ರಿ ಕೆಮ್ಮು-ಜ್ವರ ಕಾಣಿಸಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆಗೆ ಕಳಿಸಿ ಐಸೋಲೇಶನ್ನಲ್ಲಿ ಇರಿಸಲಾಗಿದೆ. ತುಕಡಿಯಲ್ಲಿದ್ದ ಇನ್ನುಳಿದ 24 ಜನರ ಆರೋಗ್ಯ ತಪಾಸಣೆ ಮಾಡಿ ಅವರನ್ನು ಕೆರಿಮತ್ತಿಹಳ್ಳಿಯಲ್ಲಿರುವ ಹಳೆ ಎಸ್ಪಿ ಕಚೇರಿಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.
'ATM ಮುಂದೆ ಮುಗಿಬೀಳಬೇಡಿ: ಜನಧನ್ ಖಾತೆ ಹಣ ಹಿಂಪಡೆಯಲು ಕಾಲಮಿತಿಯಿಲ್ಲ'
ಪೊಲೀಸ್ ಕುಟುಂಬದ ಆಕ್ಷೇಪ:
ಹಳೆ ಎಸ್ಪಿ ಕಚೇರಿಯಲ್ಲಿ ಕೆಎಸ್ಆರ್ಪಿ ತುಕಡಿಯವರಿಗೆ ವಸತಿ ವ್ಯವಸ್ಥೆ ಮಾಡಿರುವುದಕ್ಕೆ ಸಮೀಪದ ಪೊಲೀಸ್ ಕ್ವಾಟ್ರರ್ಸ್ ನಿವಾಸಿಗಳು ಮಂಗಳವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಕ್ಷಣ ಪೊಲೀಸ್ ಅಧಿಕಾರಿಗಳು ತೆರಳಿ ಅವರಿಗೆ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಕ್ವಾರಂಟೈನ್ ಆಗಿರುವವರಿಗೆ ಸೋಂಕು ತಗುಲಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಇಲ್ಲಿ ಇರಿಸಲಾಗಿದೆ ಎಂದು ತಿಳಿ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
