ಆಟೋ ಚಾಲಕರೋರ್ವರು ಪ್ರಾಮಾಣಿಕತೆ ಮೆರೆದಿದ್ದು, ಆಟೋದಲ್ಲಿ ಬಿಟ್ಟಿದ್ದ ಬೆಲೆ ಬಾಳುವ ವಸ್ತುಗಳನ್ನು ಮರಳಿ ಮಾಲಕಿಗೆ ನೀಡಿದ್ದಾರೆ.
ಬೆಂಗಳೂರು [ಡಿ.03]: ಆಟೋದಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರೋರ್ವರು ಬಿಟ್ಟ ವಸ್ತುವನ್ನು ಮರಳಿಸಿದ ಆಟೋ ಚಾಲಕನೋರ್ವನ ಪ್ರಾಮಾಣಿಕತೆಗೆ ಪೊಲೀಸರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಆಟೋದಲ್ಲಿ ಪ್ರಯಾಣಿಸುವಾಗ ಕಬಿತಾ ಪಾಂಡೆ ಎಂಬಾಕೆ ಬೆಲೆ ಬಾಳುವ ವಸ್ತುಗಳಿದ್ದ ತಮ್ಮ ಬ್ಯಾಗನ್ನು ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ಐ ಫೋನ್ ಸೇರಿದಂತೆ ಹಲವು ರೀತಿಯ ವಸ್ತುಗಳಿದ್ದವು.
ಎಲ್ಲಾ ಬೆಲೆ ಬಾಳುವ ವಸ್ತುಗಳನ್ನು ಬ್ಯಾಗು ಸಮೇತ ಮಾಲಕಿಗೆ ಆಟೋ ಚಾಲಕ ಸಂತೋಷ್ ಮರಳಿ ನೀಡಿದ್ದಾರೆ. ಹೆಬ್ಬಾಳ ಠಾಣೆಗೆ ಎಲ್ಲಾ ವಸ್ತುಗಳನ್ನು ಒಪ್ಪಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಈ ಎಲ್ಲಾ ವಸ್ತುಗಳನ್ನು ಮರಳಿ ಪೊಲೀಸರು ಮಾಲಕಿಗೆ ನೀಡಿದ್ದಾರೆ. ಇದರಿಂದ ಆಟೋ ಚಾಲಕ ಸಂತೋಷ್ ಪ್ರಮಾಣಿಕತೆಗೆ ಮೆಚ್ಚಿದ ಪೊಲೀಸರು ಅವರಿಗೆ ಅಭಿನಂದಿಸಿದ್ದಾರೆ.
ಈ ಹಿಂದೆಯೂ ಕೂಡ ಈ ರೀತಿಯ ಅನೇಕ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಇದೀಗ ಆಟೋ ಚಾಲಕನ ಪ್ರಾಮಾಣಿಕತೆ ಮಾಲಕಿಯೂ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.
