Asianet Suvarna News Asianet Suvarna News

ನೆರೆ ಸಂತ್ರಸ್ತರಿಗೆ 5 ತಿಂಗಳ ಬಾಡಿಗೆ ಒಟ್ಟಿಗೆ ನೀಡಲು ನಿರ್ಧಾರ

ನೆರೆ ಸಂತ್ರಸ್ತರಿಗೆ ಮನೆ ಬಾಡಿಗೆ ನೀಡಲು ತೊಂದರೆಯಾಗುತ್ತಿದ್ದು, ಇದೀಗ ಈ ಎಲ್ಲ ಹಣವನ್ನೂ ಒಂದೇ ಕಂತಿನಲ್ಲಿ ಪಾವತಿಸಲು ನಿರ್ಧರಿಸಲಾಗಿದೆ. ಸರಕಾರದಿಂದ ಸದ್ಯ ಬಾಡಿಗೆ ಮನೆಗಾಗಿ 5 ಸಾವಿರ ರು. ನೀಡಲಾಗುತ್ತಿದೆ. ಆದರೆ, ಕೆಲವೆಡೆಗಳಲ್ಲಿ ಮುಂಗಡ ಹಣ ಕೇಳುತ್ತಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಐದು ತಿಂಗಳ ಬಾಡಿಗೆ ಹಣವಾಗಿ 25 ಸಾವಿರ ರು. ನೀಡುವ ಯೋಜನೆ ರೂಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

House rent to flood victims to be payed in Single settlement
Author
Bangalore, First Published Sep 23, 2019, 4:22 PM IST

ಕೋಲಾರ(ಸೆ.23): ನೆರೆ ಸಂತ್ರಸ್ತರಿಗೆ ಐದು ತಿಂಗಳ ಬಾಡಿಗೆಯನ್ನು ಒಂದೆ ಕಂತಿನಲ್ಲಿ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರಕಾರದಿಂದ ಸದ್ಯ ಬಾಡಿಗೆ ಮನೆಗಾಗಿ 5 ಸಾವಿರ ರು. ನೀಡಲಾಗುತ್ತಿದೆ. ಆದರೆ, ಕೆಲವೆಡೆಗಳಲ್ಲಿ ಮುಂಗಡ ಹಣ ಕೇಳುತ್ತಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಐದು ತಿಂಗಳ ಬಾಡಿಗೆ ಹಣವಾಗಿ 25 ಸಾವಿರ ರು. ನೀಡುವ ಯೋಜನೆ ರೂಪಿಸಲಾಗುತ್ತಿದೆ ಎಂದಿದ್ದಾರೆ.

ಪ್ರತಿ ಮನೆಗೆ 10 ಸಾವಿರ ಪರಿಹಾರ ನೀಡಲಾಗುತ್ತಿದ್ದು, ಮನೆ ನಿರ್ಮಾಣಕ್ಕೆ 5 ಲಕ್ಷ ರು. ನೀಡಲಾಗುತ್ತಿದೆ. ಕೂಡಲೇ ಶೆಡ್‌ ನಿರ್ಮಿಸಿಕೊಳ್ಳುವವರಿಗೆ 50 ಸಾವಿರ ರೂ. ನೀಡಲಾಗುತ್ತಿದೆ. ಜತೆಗೆ ಮನೆ ನಿರ್ಮಿಸಿಕೊಳ್ಳುವವರಿಗೆ 1 ಲಕ್ಷ ರೂ. ನೀಡಲಾಗುವುದು ಎಂದು ಹೇಳಿದ್ದಾರೆ.

'ಅನರ್ಹ ಶಾಸಕರ ಪರ-ವಿರೋಧ ತೀರ್ಪು ಬಂದ್ರೆ ಬಿಜೆಪಿ ಬಳಿ ಪ್ಲಾನ್ A, B ರೆಡಿ'

ಪ್ರವಾಹದಲ್ಲಿ ಶೇ.15 ರಿಂದ 75ರಷ್ಟುಮನೆ ಹಾನಿಯಾಗಿರುವ ಮನೆಗಳ ಮಾಹಿತಿಯನ್ನು ತಹಸೀಲ್ದಾರರಿಂದ ಪಡೆದುಕೊಂಡು, ಹಾನಿಯಾಗಿರುವುದು ಸರಿಪಡಿಸಿಕೊಳ್ಳಲು ನೇರವಾಗಿ ಸಂತ್ರಸ್ತರ ಬ್ಯಾಂಕ್‌ ಖಾತೆಗೆ ಒಂದೇ ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗುವುದು ಎಂದು ಅಶೋಕ್‌ ಹೇಳಿದ್ದಾರೆ.

ಚೆಕ್‌ ಇಲ್ಲ, RTGS ಮಾಡಿ:

ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿನ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಚೆಕ್‌ ಬದಲಿಗೆ, RTGS ಮೂಲಕ ಪರಿಹಾರ ಹಣ ಪಾವತಿಸುವಂತೆ ಜಿಲ್ಲಾಕಾರಿಗಳಿಗೆ ಸೂಚನೆ ನೀಡಲಾಗಿದೆ. ಆ ಮೂಲಕ ಹಣದ ಅಕ್ರಮಗಳಿಗೆ ಕಡಿವಾಣ ಹಾಕಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕೇಂದ್ರದಿಂದ ಪರಿಹಾರ ಬರುವ ಭರವಸೆಯಿದೆ:

ಪ್ರವಾಹ ಕೇವಲ ಕರ್ನಾಟಕದಲ್ಲಿ ಮಾತ್ರವೇ ಆಗಿಲ್ಲ. ಮಹಾರಾಷ್ಟ್ರ, ಗುಜರಾತ್‌ ಸೇರಿದಂತೆ ಪ್ರಮುಖ ಕಡೆಗಳಲ್ಲಿ ಆಗಿದ್ದು, ಎ ವರದಿ ಆಧರಿಸಿ ಕೇಂದ್ರ ಸರಕಾರ ಪರಿಹಾರ ಬಿಡುಗಡೆ ಮಾಡುವ ಭರವಸೆಯಿದೆ ಎಂದ ಅವರು, ದ್ವೇಷದ ರಾಜಕಾರಣದಲ್ಲಿ ನಮಗೆ ನಂಬಿಕೆಯಿಲ್ಲ ಎಂದು ಅನುದಾನ ಕಡಿತದ ಕುರಿತ ಪ್ರಶ್ನೆಗೆ ಉತ್ತರಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us:
Download App:
  • android
  • ios