Asianet Suvarna News Asianet Suvarna News

ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ ನೀಡಿದ ಕೇಂದ್ರ ಸಚಿವ ಅಂಗಡಿ

15 ರಿಂದ ಹುಬ್ಬಳ್ಳಿ- ವಿಜಯಪುರ ಇಂಟರ್‌ಸಿಟಿ ರೈಲು| ಈ ಭಾಗದ ಜನರಿಗೆ ಸಾಕಷ್ಟು ಅನುಕೂಲ| ಹುಬ್ಬಳ್ಳಿಯಲ್ಲಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆಗೊಳಿಸಿದ  ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ| 

Hubballi Vijayapura Intercity Railway Service Will Be Start on Feb 15th
Author
Bengaluru, First Published Jan 30, 2020, 11:03 AM IST

ಹುಬ್ಬಳ್ಳಿ(ಜ.30): ಇದೇ ಫೆ. 15 ರಿಂದ ಹುಬ್ಬಳ್ಳಿ- ವಿಜಯಪುರ ನಡುವೆ ಇಂಟರ್‌ಸಿಟಿ ರೈಲು ಸಂಚಾರ ಪ್ರಾರಂಭವಾಗಲಿದ್ದು, ತನ್ಮೂಲಕ ಈ ಭಾಗದ ಜನರ ಪ್ರಮುಖ ಬೇಡಿಕೆ ಈಡೇರಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.

ಇಲ್ಲಿನ ದೇಸಾಯಿ ಸರ್ಕಲ್‌ನಲ್ಲಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಜಯಪುರ- ಹುಬ್ಬಳ್ಳಿ ಮಾರ್ಗದಲ್ಲಿ ಇಂಟರ್‌ಸಿಟಿ ರೈಲು ಪ್ರಾರಂಭಿಸಬೇಕೆಂಬ ಬೇಡಿಕೆ ಬಹು ಕಾಲದಿಂದ ಇತ್ತು. ಈ ನಿಟ್ಟಿನಲ್ಲಿ ಸಭೆ ನಡೆಸಿದ್ದು, ಇದೇ ಫೆ.15 ರಿಂದ ರೈಲು ಓಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಬೆಂಗಳೂರು- ಹುಬ್ಬಳ್ಳಿ ನಡುವೆ ನಾಲ್ಕೈದು ಗಂಟೆಗಳಲ್ಲಿ ಕ್ರಮಿಸುಂತಾಗಬೇಕು. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕನಿಷ್ಠ ತಾಸಿಗೆ 150 ಕಿಲೋ ಮೀಟರ್‌ ವೇಗದಲ್ಲಿ ರೈಲು ಸಂಚರಿಸಬೇಕು. ಪುಣಾ- ಬೆಂಗಳೂರು ಡಬ್ಲಿಂಗ್‌ ಕೆಲಸ ಪ್ರಗತಿಯಲ್ಲಿ ಸಾಗಿದೆ ಎಂದು ತಿಳಿಸಿದ್ದಾರೆ. 
 

Follow Us:
Download App:
  • android
  • ios