ಆ.1ರಿಂದ ಇಲ್ಲಿ ಇಂದಿರಾ ಕ್ಯಾಂಟೀನ್ ಬಂದ್?
ಈ ಜಿಲ್ಲೆಯಲ್ಲಿ ಇದೇ ಆಗಸ್ಟ್ ಒಂದರಿಂದ ಇಂದಿರಾ ಕ್ಯಾಂಟೀನ್ ಬಂದ್ ಆಗುತ್ತಿದೆ. ಅದಕ್ಕೆ ಕಾರಣ ಇಲ್ಲಿದೆ.
ಧಾರವಾಡ [ಜು.15]: ಸರ್ಕಾರದಿಂದ ಹಣ ಬರದಿರುವ ಕಾರಣ ಗುತ್ತಿಗೆದಾರರು ಆ.1ರಿಂದ ಹುಬ್ಬಳ್ಳಿ- ಧಾರವಾಡದಲ್ಲಿರುವ 9 ಇಂದಿರಾ ಕ್ಯಾಂಟೀನ್ಗೆ ಆಹಾರ ಪೂರೈಸದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಕ್ಯಾಂಟೀನ್ಗಳು ಬಾಗಿಲು ಮುಚ್ಚುವ ಸಾಧ್ಯತೆ ಇದೆ.
ಕ್ಯಾಂಟೀನ್ ಆರಂಭಗೊಂಡು ಹತ್ತು ತಿಂಗಳು ಕಳೆದರೂ ಇದುವರೆಗೂ ಗುತ್ತಿಗೆದಾರರ ಹಣವನ್ನು ನೀಡಿಲ್ಲ. ಒಟ್ಟು .2.90 ಕೋಟಿ ಹಣವನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಆಗಸ್ಟ್ 1ರಿಂದ ಅವಳಿ ನಗರದಲ್ಲಿರುವ ಒಂಬತ್ತು ಇಂದಿರಾ ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆ ನಿಲ್ಲಿಸುತ್ತೇವೆ ಎಂದು ಸರ್ಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವುದಾಗಿ ಗುತ್ತಿಗೆದಾರ ಮೋಹನ ಮೊರೆ ಪತ್ರಿಕೆಗೆ ತಿಳಿಸಿದ್ದಾರೆ.
ಪತ್ರ ಬರೆದ ತಕ್ಷಣ ಜಿಲ್ಲಾಧಿಕಾರಿ ದೀಪಾ ಚೋಳನ್ .35 ಲಕ್ಷ ನೀಡಿದ್ದಾರೆ. ಆದರೆ, ಇದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ಪೂರ್ತಿ ಹಣ ನೀಡಿದರೆ ಮಾತ್ರ ಆಹಾರ ಪೂರೈಕೆ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.