ಪ್ರಸಿದ್ಧ ದಸರಾ ಕಾರ್ಯಕ್ರಮವನ್ನು ಮುಸ್ಲಿಂ ಮುಖಂಡರೋರ್ವರು ಉದ್ಘಾಟನೆ ಮಾಡಿದ್ದಾರೆ.
ಹುಕ್ಕೇರಿ (ಅ.18): ಮೈಸೂರು ದಸರಾ ನಾಡಿಗೆ ಹೆಸರಾದರೆ, ಹುಕ್ಕೇರಿ ದಸರಾ ಭಾವೈಕ್ಯತೆಯಲ್ಲಿ ಜನಜನೀತವಾಗಿದ್ದು, ಈ ಬಾರಿ ದಸರಾ ಉತ್ಸವವನ್ನು ಮುಸ್ಲಿಂ ಸಮಾಜದ ಮುಖಂಡರಿಂದ ಚಾಲನೆ ನೀಡುವ ಮೂಲಕ ಭಾವೈಕ್ಯತೆಯ ಸಂಕೇತ ಸಾರಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪಟ್ಟಣದ ಹಿರೇಮಠದಲ್ಲಿ ಶನಿವಾರದಿಂದ ಆರಂಭವಾದ ದಸರಾ ಉತ್ಸವಕ್ಕೆ ರಾಜ್ಯ ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಮುಕ್ತಾರಹುಸೇನ ಪಠಾಣ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕ ಉಮೇಶ ಕತ್ತಿ, ಕೋವಿಡ್-19 ಹಿನ್ನೆಲೆಯಲ್ಲಿ ಈ ಸಲ ಇಲ್ಲಿಯ ದಸರಾ ಉತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಉತ್ಸವಕ್ಕೆ ಮುಕ್ತಾರಹುಸೇನ ಪಠಾಣ ಚಾಲನೆ ನೀಡಿರುವುದು ಹೆಮ್ಮೆಯ ಸಂಗತಿ ಎಂದರು.
