ಮೈಸೂರು ಜಿಲ್ಲೆಯ ಹುಣಸೂರು‌ ಬಿಜೆಪಿ‌ ಅಭ್ಯರ್ಥಿ ದೇವರಳ್ಳಿ ಸೋಮಶೇಖರ್ ತಂದೆ ಅಣ್ಣೇಗೌಡ ನಿಧನ 

ಹುಣಸೂರು(ಏ.25):  ಮೈಸೂರು ಜಿಲ್ಲೆಯ ಹುಣಸೂರು‌ ಬಿಜೆಪಿ‌ ಅಭ್ಯರ್ಥಿ ದೇವರಳ್ಳಿ ಸೋಮಶೇಖರ್ ತಂದೆ ಅಣ್ಣೇಗೌಡ(70) ಇಂದು(ಮಂಗಳವಾರ) ನಿಧನರಾಗಿದ್ದಾರೆ. ಅಣ್ಣೇಗೌಡ ಅವರು ವಯೋಸಹಜ‌ ಕಾಯಿಲೆಯಿಂದ ಬಳಲುತ್ತಿದ್ದರು. 

Add Asianetnews Kannada as a Preferred SourcegooglePreferred

ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಅಣ್ಣೇಗೌಡ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸ್ವ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಅಂತ ಕುಟುಂಬಸ್ಥರಿಂದ ತಿಳಿದು ಬಂದಿದೆ. 

ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

ದೇವರಳ್ಳಿ ಸೋಮಶೇಖರ್ ಅವರು ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ದೇವರಳ್ಳಿ ಸೋಮಶೇಖರ್ ಅವರು ಈ ಬಾರಿ ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ.