Asianet Suvarna News Asianet Suvarna News

ಗೆಲುವಿಗಾಗಿ ಪ್ರಾರ್ಥನೆ: ಕಾಂಗ್ರೆಸ್ ಅಭ್ಯರ್ಥಿಯಿಂದ ಸಾಯಿಬಾಬಾಗೆ ಬೆಳ್ಳಿ ಪಾದುಕೆ

ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಪತ್ನಿ ಸುಪ್ರಿಯಾ, ತಾಯಿ ರತ್ನಮ್ಮ ಹಾಗೂ ಕಾರ್ಯಕರ್ತರ ಜೊತೆಗೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸಮೇತ ಸಾಯಿಬಾಬಾನಿಗೆ ಪೂಜೆ ಸಲ್ಲಿಸಿ ಬೆಳ್ಳಿ ಪಾದುಕೆ ಅರ್ಪಿಸಿದ್ದಾರೆ.

hunsur congress candidate manjunath offers silver slippers to saibaba
Author
Bangalore, First Published Dec 9, 2019, 10:09 AM IST

ಮೈಸೂರು(ಡಿ.09): ಹುಣಸೂರು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಾಯಿಬಾಬಾನಿಗೆ ಪೂಜೆ ಸಲ್ಲಿಸಿದ ಮಂಜುನಾಥ್ ಗೆಲುವಿಗಾಗಿ ಪ್ರಾರ್ಥನೆ ಮಾಡಿದ್ದಾರೆ.

ಪತ್ನಿ ಸುಪ್ರಿಯಾ, ತಾಯಿ ರತ್ನಮ್ಮ ಹಾಗೂ ಕಾರ್ಯಕರ್ತರ ಜೊತೆಗೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸಮೇತ ಸಾಯಿಬಾಬಾನಿಗೆ ಪೂಜೆ ಸಲ್ಲಿಸಿ ಬೆಳ್ಳಿ ಪಾದುಕೆ ಅರ್ಪಿಸಿದ್ದಾರೆ. ಹೊಸ ಬೆಳ್ಳಿ ಪಾದುಕೆ ಅರ್ಪಿಸಿ ಪೂಜೆ ಸಲ್ಲಿಸಲಾಗಿದೆ.

ಉಪಚುನಾವಣೆ ಫಲಿತಾಂಶ ಲೈವ್‌ ಅಪ್ಡೇಟ್‌ಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

15 ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ಚುನಾವಣೆಯ ನಂತರ ಅಭ್ಯರ್ಥಿಗಳು ಟೆಂಪಲ್ ರನ್ ನಡೆಸಿದ್ದಾರೆ. ಡಿಸೆಂಬರ್ 5 ರಂದು ಉಪಚುನಾವಣೆ ಮತದಾನ ಪ್ರಕ್ರಿಯೆ ನಡೆದಿತ್ತು.

ತಾಳಿ ಕಟ್ಟೋ ಶಾಸ್ತ್ರ ಮುಗಿದ ಮೇಲೆ ಮೇಲೆ ಅಪ್ರಾಪ್ತೆ ಮದುವೆಗೆ ತಡೆದ್ರು

Follow Us:
Download App:
  • android
  • ios