ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿದರೆ ನಮ್ಮ ಕಾರ್ಯ ಮುಗಿಯಲಿಲ್ಲ. ಪ್ರತಿಯೊಬ್ಬರು ಹಿಂದೂ ಧರ್ಮ ಮತ್ತು ಹಿಂದೂ ಸಂಸ್ಕಾರ ಉಳಿಸಲು ಶ್ರಮಿಸಬೇಕು. ಈ ಮೂಲಕ ರಾಮರಾಜ್ಯ ನಿರ್ಮಾಣಕ್ಕೆ ಶ್ರಮಿಸಿದರೇ ಮಾತ್ರ ಹಿಂದೂಧರ್ಮ ವಿಶ್ವದಲ್ಲಿ ಅಸ್ತಿತ್ವದಲ್ಲಿರಲು ಸಾಧ್ಯ ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥರು ಹೇಳಿದರು. 

ರಾಮದುರ್ಗ (ಮೇ.29): ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿದರೆ ನಮ್ಮ ಕಾರ್ಯ ಮುಗಿಯಲಿಲ್ಲ. ಪ್ರತಿಯೊಬ್ಬರು ಹಿಂದೂ ಧರ್ಮ ಮತ್ತು ಹಿಂದೂ ಸಂಸ್ಕಾರ ಉಳಿಸಲು ಶ್ರಮಿಸಬೇಕು. ಈ ಮೂಲಕ ರಾಮರಾಜ್ಯ ನಿರ್ಮಾಣಕ್ಕೆ ಶ್ರಮಿಸಿದರೇ ಮಾತ್ರ ಹಿಂದೂಧರ್ಮ ವಿಶ್ವದಲ್ಲಿ ಅಸ್ತಿತ್ವದಲ್ಲಿರಲು ಸಾಧ್ಯ ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥರು ಹೇಳಿದರು. ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿ 48 ದಿನಗಳ ಕಾಲ ಮಂಡಲಪೂಜೆ ನೇರವೇರಿಸಿದ ಹಿನ್ನೆಲೆಯಲ್ಲಿ ಉಡುಪಿ ಪೇಜಾವರ ಮಠದ ಶ್ರೀವಿಶ್ವ ಪ್ರಸನ್ನ ತೀರ್ಥರಿಗೆ ರಾಮದುರ್ಗದ ರಾಘವೇಂದ್ರ ಮಠದಲ್ಲಿ ಬ್ರಾಹ್ಮಣ ಸಮಾಜ ಮತ್ತು ಹಿಂದೂಪರ ಸಂಘಟನೆಗಳು ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಪೂಜ್ಯರು ಆಶೀರ್ವಚನ ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಿಂದೂಧರ್ಮ ಎಂಬ ಗರ್ಭಗುಡಿಯನ್ನು ರಕ್ಷಿಸಲು ವಿಶ್ವಹಿಂದೂ ಪರಿಷತ್, ಭಜರಂಗದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಒಂದಾಗಿ ಶ್ರಮಿಸಬೇಕು ಎಂದು ಹೇಳಿದ ಶ್ರೀಗಳು, ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಹಿಂದೂಧರ್ಮ ರಕ್ಷಣೆಗೆ ಮಂದಾಗಬೇಕು ಎಂದು ಕರೆ ನೀಡಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎನ್ನುತ್ತಿದ್ದರು. ಅದು ಐನೂರು ವರ್ಷಗಳ ನಂತರ ಶ್ರೀರಾಮಚಂದ್ರನ ಪ್ರತಿಷ್ಠಾಪಿಸುವ ಮೂಲಕ ಕನಸು ನನಸಾಗಿದೆ. ಮಂದಿರ ನಿರ್ಮಾಣ ಮಾಡಿದರೆ ಜವಾಬ್ದಾರಿ ಮುಗಿಯಲಿಲ್ಲ. ಮಂದಿರವನ್ನಾಗಿ ಉಳಿಸಬೇಕು. ಹಿಂದೂಗಳು ಹಿಂದೂಗಳಾಗಿ ಉಳಿಯಬೇಕು. ಇದಕ್ಕಾಗಿ ಮೂಲ ಸಂಸ್ಕೃತಿ ಬಗ್ಗೆ ಮತ್ತು ಹಿಂದುಗಳಾಗಿ ಉಳಿಯಲು ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಬೇಕು ಎಂದು ಹೇಳಿರು.

ನನ್ನ ದೂಷಿಸುವ ಸಚಿವ ಪ್ರಿಯಾಂಕ್‌ ತಾವೇ ಮೈಪೂರ್ತಿ ಗ್ರೀಸ್‌ ಮೆತ್ತಿಕೊಂಡಿದ್ದಾರೆ: ಆಂದೋಲಾ ಶ್ರೀ ಲೇವಡಿ

ಮಕ್ಕಳಿಗೆ ಶಾಲಾ ಕಾಲೇಜುಗಳಲ್ಲಿ ನೀತಿ ಶಿಕ್ಷಣದ ವ್ಯವಸ್ಥೆ ಇಲ್ಲದಂತಾಗಿದೆ. ಪರಿಣಾಮ ರಾಮ ರಾಜ್ಯವಾಗಬೇಕಾದರೆ ರಾಮ ಸಂಸ್ಕೃತಿ, ರಾಮಾಯಣದ ಕುರಿತು ಮಕ್ಕಳಿಗೆ ತಿಳಿಸುವ ಕೆಲಸ ಮನೆಯಿಂದ ಆರಂಭವಾಗಬೇಕು. ಮನೆಯಲ್ಲಿ ಮಕ್ಕಳಿಗೆ ನಾಮಕರಣದ ಪದ್ಧತಿ ಬದಲಾಗಬೇಕಿದೆ. ವೇದ, ಉಪನಿಷತ್ ಹಾಗೂ ರಾಮಾಯಣದಲ್ಲಿ ಬರುವ ದೇವರ ಹೆಸರನ್ನು ಇಡುವ ಮೂಲಕ ರಾಮರಾಜ್ಯದ ಕಲ್ಪನೆ ಮೂಡಿಸುವ ಕೆಲಸ ಮಾಡಿರಿ ಎಂದರು. ಕಾರ್ಯಕ್ರಮದಲ್ಲಿ ಅಯೋಧ್ಯೆಯಲ್ಲಿ ಕರಸೇವಕರಾಗಿ ಕಾರ್ಯನಿರ್ವಹಿಸಿದ ಜಿ.ಬಿ.ಮೋಡಕ, ಮಲ್ಲಿಕಾರ್ಜುನ ಭಾವಿಕಟ್ಟಿ, ರಮೇಶ ಪ್ರಭು ಅವರನ್ನು ಶ್ರೀಗಳು ಸನ್ಮಾನಿಸಿದರು. ಅಭಿನಂದನಾ ಸಮಿತಿ ಅಧ್ಯಕ್ಷರಾದ ಪ್ರಹ್ಲಾದ ಜೋಶಿ, ಬ್ರಾಹ್ಮಣ ಸಮಾಜದ ಅಧ್ಯಕ್ಷ ಪ್ರಸಾದ ಕುಲಕರ್ಣಿ, ವ್ಯಾಸಾಚಾರ್ಯ ಕುಲಕರ್ಣಿ, ವೇದವತಿ ಕುಲಕರ್ಣಿ, ಆರ್. ಆರ್. ಕುಲಕರ್ಣಿ ಉಪಸ್ಥಿತರಿದ್ದರು. ಎಸ್.ಎಲ್.ಮಣ್ಣೂರು ನಿರೂಪಿಸಿದರು, ಪವನ ದೇಶಪಾಂಡೆ ವಂದಿಸಿದರು.