Asianet Suvarna News Asianet Suvarna News

ತುಮಕೂರು: ಫೆ.6 ಕ್ಕೆ ಪ್ರಧಾ​ನಿ​ಯಿಂದ ಹೆಲಿ​ಕಾ​ಪ್ಟರ್‌ ತಯಾರಿಕಾ ಉದ್ಘಾ​ಟ​ನೆ

ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್‌ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಘಟಕವನ್ನು ಫೆ. 6ರಂದು ಮಧ್ಯಾಹ್ನ 3.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿ ಎಲ್‌ಯುಎಚ್‌ ಹೆಲಿಕಾಪ್ಟರ್‌ನ್ನು ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ್‌ ತಿಳಿಸಿದರು.

Inauguration of Helicopter Manufacturing by Prime Minister on February 6 at tumakuru rav
Author
First Published Feb 4, 2023, 4:40 AM IST

ತುಮ​ಕೂರು (ಫೆ.4) : ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್‌ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಘಟಕವನ್ನು ಫೆ. 6ರಂದು ಮಧ್ಯಾಹ್ನ 3.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿ ಎಲ್‌ಯುಎಚ್‌ ಹೆಲಿಕಾಪ್ಟರ್‌ನ್ನು ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ್‌ ತಿಳಿಸಿದರು.

ಗುಬ್ಬಿ ತಾಲೂಕು ಬಿದರೆಹಳ್ಳ ಕಾವಲ್‌ ಸಮೀಪ ನೂತನವಾಗಿ ನಿರ್ಮಾಣವಾಗಿರುವ ಎಚ್‌ಎಎಲ್‌ ಘಟಕದ ಮುಂಭಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ನಿರ್ಮಾಣಕ್ಕೆ 615 ಎಕರೆ ಜಮೀನನ್ನು ಕೊಡಲಾಗಿತ್ತು. 2016 ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೂಮಿ ಪೂಜೆ ನೆರವೇರಿಸಿದ್ದರು. 6 ವರ್ಷಗಳಲ್ಲಿ ಹೆಲಿಕಾಪ್ಟರ್‌ ತಯಾರು ಮಾಡುವ ಮಟ್ಟಕ್ಕೆ ಸಿದ್ಧಗೊಳಿಸಿ ಲೋಕಾರ್ಪಣೆ ಮಾಡಲಾಗುತ್ತಿದೆ. ಹೆಲಿಕಾಪ್ಟರ್‌ ಘಟಕದ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಈ ಅಭೂತ ಪೂರ್ವ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವರು, ಸಹಾಯಕ ರಕ್ಷಣಾ ಸಚಿವರು, ರಾಜ್ಯ ರಕ್ಷಣಾ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಸೇರಿದಂತೆ ಸುಮಾರು 1500ಕ್ಕೂ ಹೆಚ್ಚು ಮಂದಿ ಗಣ್ಯರು ಆಗಮಿಸುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆ, ಬಸ್‌ ವ್ಯವಸ್ಛೆ, ಪಾರ್ಕಿಂಗ್‌ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಯಾವುದೇ ರೀತಿಯ ಅಡಚಣೆಗಳು ಉಂಟಾಗದಂತೆ ಪೊಲೀಸ್‌ ಇಲಾಖೆ ಮತ್ತು ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಗೆ ಪ್ರಧಾನಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಐದಾರು ಬಾರಿ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ಕೊಡಲಾಗಿದೆ. ಎಚ್‌ಎಎಲ್‌ ಅಧಿಕಾರಿಗಳು ಸಹ ಎಲ್ಲ ಸಿದ್ಧತೆ ಕೈಗೊಂಡಿದ್ದಾರೆ. ಎಚ್‌ಎಎಲ್‌ ಘಟಕದ ಉದ್ಘಾಟನೆ ಬಳಿಕ ಜಲಜೀವನ್‌ ಮಿಷನ್‌ ಯೋಜನೆಯ ಮನೆ ಮನೆ ಗಂಗೆ ಕಾರ್ಯಕ್ರಮಕ್ಕೆ ಪ್ರಧಾನಿಗಳು ಶಂಕುಸ್ಥಾಪನೆಯನ್ನು ನೆರವೇರಿಸುವರು. ಈ ಕಾರ್ಯಕ್ರಮಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳ ಕುರಿತು ಪ್ರಧಾನಿ ಕಚೇರಿಯಿಂದ ಇದುವರೆಗೂ ಮಾಹಿತಿ ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಎಚ್‌ಎಎಲ್‌ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೆಲಸ ಪ್ರಾರಂಭವಾದಾಗ ರಾಜ್ಯ ಸರ್ಕಾರದಿಂದ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಎಚ್‌ಎಎಲ್‌ ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಫೆ. 6ರಂದು ಮಧ್ಯಾಹ್ನ 1 ಗಂಟೆಯಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಜನರನ್ನು ಬಿಡಲು ಪ್ರಾರಂಭ ಮಾಡಲಾಗುತ್ತಿದೆ. 2.30 ರೊಳಗೆ ಎಲ್ಲರೂ ಒಳಗೆ ಸೇರಿರಬೇಕು. ಕಾರ್ಯಕ್ರಮಕ್ಕೆ ಆಗಮಿಸುವವರು ನೀರು, ಬ್ಯಾಗ್‌ಗಳು, ಪ್ಲಾಸ್ಟಿಕ್‌ ಕವರ್‌ ಸೇರಿದಂತೆ ಇತರೆ ಯಾವುದೇ ವಸ್ತುಗಳನ್ನು ತರುವಂತಿಲ್ಲ ಎಂದು ಮನವಿ ಮಾಡಿರುವ ಅವರು, ಕಾರ್ಯಕ್ರಮದ ಸ್ಥಳದಲ್ಲೇ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

Tumakuru: ರೈಲ್ವೇ ಬಿಡ್ಜ್ ನಿರ್ಮಿಸುವಂತೆ ಒತ್ತಾಯಿಸಿ ಹಳಿ ಮೇಲೆ‌ ಕುಳಿತು ಗ್ರಾಮಸ್ಥರ ಪ್ರತಿಭಟನೆ

ಮಾರ್ಗ ಬದಲಾವಣೆ

ಫೆ. 6 ರಂದು ಬೆಳಿಗ್ಗೆಯಿಂದ ಸಂಜೆವರೆಗೆ 206 ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ವಾಹನ ಚಾಲಕರು, ಸಾರ್ವಜನಿಕರು ಮಾರ್ಗ ಬದಲಾವಣೆ ಬಗ್ಗೆ ಗಮನ ಹರಿಸಿ ಸಹಕರಿಸಬೇಕು ಎಂದು ಡೀಸಿ ಪಾಟೀಲ ಮನವಿ ಮಾಡಿದರು.

‘ಎಚ್‌​ಎ​ಎಲ್‌ ಮತ್ತೊಂದು ಫುಡ್‌ ಪಾರ್ಕ್ ಆಗ​ದಿ​ರ​ಲಿ’

ತುಮ​ಕೂರು: ಭಾರಿ ಪ್ರಚಾರದೊಂದಿಗೆ ಫೆ.6ರಂದು ಉದ್ಘಾಟನೆಗೊಳ್ಳುತ್ತಿರುವ ಎಚ್‌ಎಎಲ್‌ ಘಟಕ ಪ್ರಧಾನಿ ನರೇಂದ್ರಮೋದಿ ಅವರ ಸುಳ್ಳಿನ ಭರವಸೆಯ ಮತ್ತೊಂದು ಫುಡ್‌ ಪಾರ್ಕ್ ಆಗದಿರಲಿ ಎಂದು ಭಾರತ್‌ ಕಮ್ಯುನಿಷ್‌್ಟಪಕ್ಷದ ಜಿಲ್ಲಾ ಕಾರ್ಯದರ್ಶಿ ಗಿರೀಶ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ತುಮಕೂರಿಗೆ ಆಗಮಿಸಿದ ಮೋದಿ 10 ಸಾವಿರ ಉದ್ಯೋಗ ನೀಡುವ ಬಣ್ಣದ ಮಾತನಾಡಿ, ಕರ್ನಾಟಕವಲ್ಲದೆ, ಆಂಧ್ರಪ್ರದೇಶದ ಜನರಿಗೂ ಅನುಕೂಲವಾಗುತ್ತದೆ ಎಂದು ಆಶ್ವಾಸನೆ ನೀಡಿ ಉದ್ಘಾಟಿಸಿದ ಮೇಘಾ ಫುಡ್‌ಪಾರ್ಕು ಇದುವರೆಗೂ ರೈತರ ಒಂದು ಕೆ.ಜಿ. ತರಕಾರಿ, ಹಣ್ಣು,ಹಂಪಲು ಖರೀದಿಸಿಲ್ಲ. ಬದಲಾಗಿ ಸಬ್ಸಿಡಿ ಪಡೆದ ನಂತರ ಫುಡ್‌ಪಾರ್ಕು ಮಾರಾಟ ಮಾಡಲಾಗಿದೆ. ಸುಮಾರು 110 ಎಕರೆ ಭೂಮಿ ಮತ್ತು 100 ಕೋಟಿ ರು. ಸಬ್ಸಿಡಿ ಹಣ ಉಳ್ಳವರ ಪಾಲಾಯಿತು. ಆದರೆ ಉದ್ಯೋಗದ ಭರವಸೆ ಮಾತ್ರ ಈಡೇರಲಿಲ್ಲ. ಈಗ ಅದೇ ಅಬ್ಬರದಲ್ಲಿ ಎಚ್‌ಎಎಲ್‌ ಉದ್ಘಾಟನೆಯನ್ನು ಮಾಡಲಾಗುತ್ತಿದೆ. ಇದನ್ನು ಮಾರಾಟ ಮಾಡುವ ದಿನ ಯಾವಾಗ ಎಂದು ಇಂದೇ ಜನರಿಗೆ ತಿಳಿಸಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ವರ್ಷಕ್ಕೆ ಎರಡು ಕೋಟಿ ಉದ್ಯೋಗ, ಎಲ್ಲರ ಖಾತೆಗೆ 15 ಲಕ್ಷ ರು. ಹಣ ಸೇರಿದಂತೆ ಯಾವುದೇ ಭರವಸೆ ಈಡೇರಿಲ್ಲ. ಬದಲಾಗಿ ಉದ್ಯೋಗ ಕಳೆದುಕೊಂಡವರೇ ಹೆಚ್ಚು. ಹಲವು ಕಾನೂನುಗಳನ್ನು ತಿದ್ದುಪಡಿ ಮಾಡಿ ಅದಾನಿಗೆ ಅನುಕೂಲ ಮಾಡಿಕೊಟ್ಟು, ಎಲ್‌ಐಸಿ ಮತ್ತು ಎಸ್‌ಬಿಐ ನೀಡಿದ್ದ ಸಾಲ ಜನರ ಕೈ ತಲುಪದಂತಹ ಸ್ಥಿತಿ ತಲುಪಿದೆ. ಇನ್ನು ಎಷ್ಟುದಿನ ಇದೇ ಸುಳ್ಳನ್ನು ಮುಂದುವರೆಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್

ಪ್ರಧಾನಿಯಾಗಿ ತುಮಕೂರು ಜಿಲ್ಲೆಗೆ ನಾಲ್ಕನೇ ಬಾರಿಗೆ ಬರುತ್ತಿರುವ ನರೇಂದ್ರಮೋದಿ ಅವರು, ರಾಜ್ಯದ ಜನರ ಈ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಸರ್ಕಾರದ ನಿಯಮಗಳ ಅನ್ವಯ ದುಡಿಯುವ ಕಾರ್ಮಿಕರಿಗೆ ಕನಿಷ್ಠ 31500 ರು. ಕನಿಷ್ಠ ವೇತನ, ಅತ್ಯಂತ ದೊಡ್ಡ ಉದ್ಯೋಗ ಸೃಷ್ಟಿಕ್ಷೇತ್ರವಾದ ನಿರ್ಮಾಣ ಕ್ಷೇತ್ರದಲ್ಲಿ ಕಟ್ಟಡ ಕಾರ್ಮಿಕರ ಸವಲತ್ತುಗಳ ನೀಡಲು ಅಗತ್ಯ ಕ್ರಮದ ಜೊತೆಗೆ ಕಾರ್ಮಿಕ ಮಂಡಳಿ ರಕ್ಷಿಸಲು ನಿಮ್ಮ ಕ್ರಮ ಏನು ಎಂದು ಸಿಪಿಐನ ಜಿಲ್ಲಾ ಕಾರ್ಯದರ್ಶಿ ಗಿರೀಶ್‌ ಪ್ರಶ್ನಿ​ಸಿ​ದ್ದಾ​ರೆ.

ಸುದ್ದಿಗೋಷ್ಠಿಯಲ್ಲಿ ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಚಂದ್ರಶೇಖರ್‌,ಗೋವಿಂದರಾಜು, ಖಜಾಂಚಿ ಅಶ್ವತ್‌್ಥನಾರಾಯಣ, ಜಿಲ್ಲಾ ಮಂಡಳಿ ಸದಸ್ಯರಾದ ಶಶಿಕಾಂತ್‌, ಗೋಂದರಾಜು, ರುದ್ರಪ್ಪ, ರವಿಪ್ರಸಾದ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow Us:
Download App:
  • android
  • ios