Asianet Suvarna News Asianet Suvarna News

ಮಂತ್ರಾಲಯದಲ್ಲಿ ಕರ್ನಾಟಕ ಛತ್ರ ಲೋಕಾರ್ಪಣೆ

  • ಮಂತ್ರಾಲಯದಲ್ಲಿ ಕರ್ನಾಟಕ ಛತ್ರ ಲೋಕಾರ್ಪಣೆ
  • .4 ಕೋಟಿ ವೆಚ್ಚದಲ್ಲಿ 50 ಕೊಠಡಿಗಳ ನಿರ್ಮಾಣ
  • ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟನೆ
Inauguration of Karnataka Chhatra at Mantralaya rav
Author
Bengaluru, First Published Aug 10, 2022, 1:31 AM IST

ರಾಯಚೂರು (ಆ.10) : ಕರ್ನಾಟಕ ಸರ್ಕಾರದಿಂದ ಮಂತ್ರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ 50 ಕೊಠಡಿಗಳ ನೂತನ ಛತ್ರವನ್ನು ಮುಜರಾಯಿ, ಹಜ್‌ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ(Shashikala Jolle) ಮಂಗಳವಾರ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸುಕ್ಷೇತ್ರ ಮಂತ್ರಾಲಯ(Mantralaya)ದಲ್ಲಿ .4 ಕೋಟಿ ಅನುದಾನದಲ್ಲಿ 50 ಕೊಠಡಿಗಳ ಕರ್ನಾಟಕ ಛತ್ರ ನಿರ್ಮಾಣವಾಗಿದೆ. ಇದರಲ್ಲಿ 40 ಡಿಲಕ್ಸ್‌ ಹಾಗೂ 10 ವಿಐಪಿ ರೂಂಗಳಿದ್ದು, ಮುಜರಾಯಿ ಇಲಾಖೆಯಿಂದ .54 ಲಕ್ಷ ವೆಚ್ಚದಲ್ಲಿ ಪೀಠೋಪಕರಣಗಳನ್ನು ಒದಗಿಸಲಾಗಿದೆ. ಛತ್ರಗಳ ಅಭಿವೃದ್ಧಿಗೆ .4 ಕೋಟಿ ಹೆಚ್ಚುವರಿ ಅನುದಾನ ಒದಗಿಸಲಾಗಿದ್ದು, ಸದ್ಯದಲ್ಲೇ ಇತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ರಾಯಚೂರು: ಆ.10ರಿಂದ 16ವರೆಗೆ ಮಂತ್ರಾಲಯದಲ್ಲಿ ರಾಘವೇಂದ್ರ ಆರಾಧನೆ

ಸುಕ್ಷೇತ್ರ ಮಂತ್ರಾಲಯದಲ್ಲಿರುವ ಹಳೆಯ ಕಟ್ಟಡವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ .4 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಮಂತ್ರಾಲಯದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ, ಮಂತ್ರಾಲಯ ಕರ್ನಾಟಕ ಛತ್ರದ ವ್ಯವಸ್ಥಾಪಕಿ ತ್ರಿವೇಣಿ ಸೇರಿ ಅನೇಕರು ಇದ್ದರು.

-ಅಯೋಧ್ಯೆಯಲ್ಲೂ ಛತ್ರ ನಿರ್ಮಾಣಕ್ಕೆ ಪತ್ರ ವ್ಯವಹಾರ:

ಕರ್ನಾಟಕ(Mantralahya) ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲೂ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರಪ್ರದೇಶ ರಾಜ್ಯದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು. ಒಟ್ಟಾರೆ ಹೊರ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೂ ನಮ್ಮ ರಾಜ್ಯದ ಜನರಿಗೆ ಅನುಕೂಲ ಮಾಡಿಕೊಡಲು ಎಲ್ಲಾ ರೀತಿಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಮಂತ್ರಾಲಯ ಅಭಿವೃದ್ಧಿಗೆಕರ್ನಾಟಕ ಸಹಕಾರ: ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಮಾತನಾಡಿ, ಕರ್ನಾಟಕ ರಾಜ್ಯದಿಂದಲೇ ಅತಿ ಹೆಚ್ಚು ಯಾತ್ರಾರ್ಥಿಗಳು ಆಗಮಿಸುವ ಮಂತ್ರಾಲಯಕ್ಕೆ ಕರ್ನಾಟಕ ಸರ್ಕಾರ ಬಹಳಷ್ಟುಸಹಕಾರ ನೀಡಿದೆ. 30 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಕರ್ನಾಟಕ ಛತ್ರ ಶಿಥಿಲವಾಗಿತ್ತು. ಇದನ್ನು ಮನಗೊಂಡ ಕರ್ನಾಟಕ ಸರ್ಕಾರ .4 ಕೋಟಿ ವೆಚ್ಚದಲ್ಲಿ 50 ಕೊಠಡಿಗಳ ನೂತನ ಛತ್ರ ನಿರ್ಮಿಸಿದೆ. ಈ ಬಾರಿಯ ರಾಯರ ಆರಾಧನೆಯ ಸಂದರ್ಭದಲ್ಲಿ ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಆಗಮಿಸುವ ನಿರೀಕ್ಷೆಯಿದ್ದು, ನೂತನ ಕಟ್ಟಡದಿಂದ ಬಹಳಷ್ಟುಅನುಕೂಲವಾಗಲಿದೆ ಎಂದು ಹೇಳಿದರು.

ಮಂತ್ರಾಲಯದ ರಾಯರ ಭಕ್ತರೇ ಎಚ್ಚರ! ಆನ್‌ಲೈನ್‌ನಲ್ಲಿ ಪ್ರಸಾದ ಬುಕ್‌ ನೆಪದಲ್ಲಿ ಖದೀಮರ ವಂಚನೆ

ಕರ್ನಾಟಕ ಛತ್ರಕ್ಕೆ ಹೆಚ್ಚು ಅನುದಾನ:

ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನಮ್ಮ ಇಲಾಖೆಗೆ ನೀಡಲಾಗಿದೆ. ರಾಜ್ಯದಿಂದ ಹೊರರಾಜ್ಯಕ್ಕೆ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗಿದೆ. ಕೆಲ ದಿನಗಳ ಹಿಂದೆ ಕೇರಳದ ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕಾಗಿ .5 ಕೋಟಿ, ಮಹಾರಾಷ್ಟ್ರ ರಾಜ್ಯದ ಫಂಡರಾಪುರದಲ್ಲಿ ಛತ್ರಕ್ಕಾಗಿ .3 ಕೋಟಿ, ಮಂತ್ರಾಲಯದಲ್ಲಿ ಛತ್ರಗಳ ಅಭಿವೃದ್ಧಿಗೆ .4 ಕೋಟಿ ನೀಡಲಾಗಿದೆ. ಈ ಹಿಂದೆ ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ .232 ಕೋಟಿ ಅನುದಾನ ನೀಡಲಾಗಿದ್ದು, ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿಸಿದರು.

Follow Us:
Download App:
  • android
  • ios