Asianet Suvarna News Asianet Suvarna News

ಕಲಬುರಗಿ: ದಂಡಗುಂಡನಲ್ಲಿ ಚಿರತೆ ಪ್ರತ್ಯಕ್ಷ, ಹೆಚ್ಚಾದ ಆತಂಕ

ಯಾದಗಿರಿಯಿಂದ ದಂಡಗುಂಡಕ್ಕೆ ಬರುವಾಗ ಚಿರತೆ ಪ್ರತ್ಯಕ್ಷವಾಗಿದೆ. ವಿದ್ಯಾನಂದ ಹಿರೇಮಠ ಅವರು ಕಾರಿನಲ್ಲಿ ತಮ್ಮ ಕುಟುಂಬದ ಜೊತೆ ತೆರಳುತ್ತಿದ್ದಾಗ ಚಿರತೆ ಕಾಣಿಸಿಕೊಂಡಿದೆ. ಚಿರತೆ ಕಂಡ ವಿದ್ಯಾನಂದ ಅವರ ಕುಟುಂಬದವರು ಗಾಬರಿಯಾಗಿದ್ದಾರೆ. 

Increased Anxiety due to Leopard Visible at Chittapur in Kalaburagi grg
Author
First Published Sep 3, 2023, 12:26 PM IST | Last Updated Sep 3, 2023, 12:26 PM IST

ಕಲಬುರಗಿ(ಸೆ.03):  ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಯಾಗಾಪೂರ ಗುಡ್ಡದಲ್ಲಿ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. 

ಯಾದಗಿರಿಯಿಂದ ದಂಡಗುಂಡಕ್ಕೆ ಬರುವಾಗ ಚಿರತೆ ಪ್ರತ್ಯಕ್ಷವಾಗಿದೆ. ವಿದ್ಯಾನಂದ ಹಿರೇಮಠ ಅವರು ಕಾರಿನಲ್ಲಿ ತಮ್ಮ ಕುಟುಂಬದ ಜೊತೆ ತೆರಳುತ್ತಿದ್ದಾಗ ಚಿರತೆ ಕಾಣಿಸಿಕೊಂಡಿದೆ. ಚಿರತೆ ಕಂಡ ವಿದ್ಯಾನಂದ ಅವರ ಕುಟುಂಬದವರು ಗಾಬರಿಯಾಗಿದ್ದಾರೆ. 

ಮೈಸೂರು: ಕೆ.ಆರ್‌.ನಗರ ತಾಲೂಕಲ್ಲಿ ಬೋನಿಗೆ ಸೆರೆಸಿಕ್ಕ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಾರಿನ ಹೆಡ್ ಲೈಟ್‌ ಬೆಳಕಲ್ಲಿ ವಿದ್ಯಾನಂದ ಅವರು ಚಿರತೆಯ ವಿಡಿಯೋ ಸೆರೆ ಹಿಡಿದಿದ್ದಾರೆ. ಪ್ರಸಿದ್ಧ ದಂಡಗುಂಡ ಬಸವೇಶ್ವರ ಜಾತ್ರೆ ನಾಳೆ ನಡೆಯಲಿದೆ. ಸಾಕಷ್ಟು ಭಕ್ತ ಸಮೂಹ ಪಾದಯಾತ್ರೆ ಮೂಲಕ ಜಾತ್ರೆಗೆ ಬರಲಿದ್ದಾರೆ. ಈ ಮಾರ್ಗದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಜಾತ್ರೆಗೆ ಬರುವ ಭಕ್ತರು ಅತಂಕಕ್ಕೊಳಗಾಗಿದ್ದಾರೆ. 

Latest Videos
Follow Us:
Download App:
  • android
  • ios