ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ನಡೆದ ಘಟನೆ| ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ| . ಗಾಯಾಳುಗಳಿಗೆ ಹಗರಿಬೊಮ್ಮನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ|
ವಿಜಯನಗರ(ಫೆ.21): ಖಾಸಗಿ ಬಸ್ವೊಂದು ಪಲ್ಟಿಯಾಗಿ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಇಂದು ಬೆಳಗಿನ ಜಾವ (ಭಾನುವಾರ) ನಡೆದಿದೆ.
Add Asianetnews Kannada as a Preferred Source

ತಾಲೂಕಿನ ಬೆಣ್ಣಿಕಲ್ಲು ಹಾಗೂ ವರಲಹಳ್ಳಿ ನಡುವೆ ಕುಕ್ಕೆಶ್ರೀ ಖಾಸಗಿ ಬಸ್ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರಲ್ಲಿ ಶೇ.70 ರಷ್ಟು ಯುವಜನಾಂಗ; ಬೆಚ್ಚಿ ಬೀಳಿಸುತ್ತಿದೆ ವರದಿ!
ಬಸ್ ಪಲ್ಟಿಯಾದ ಪರಿಣಾಮ ಬಸ್ನಲ್ಲಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನ ಹಗರಿಬೊಮ್ಮನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
