ಮಂಗಳೂರಿನ ಕಾಂಗ್ರೆಸ್‌ ಮುಖಂಡನ ಮನೆ ಮೇಲೆ‌ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಇಂದು ಮುಂಜಾನೆ ಕಾಂಗ್ರೆಸ್‌ ಮುಖಂಡ ವಿವೇಕ್ ಪೂಜಾರಿ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

ಮಂಗಳೂರು (ಏ.15): ಮಂಗಳೂರಿನ ಕಾಂಗ್ರೆಸ್‌ ಮುಖಂಡನ ಮನೆ ಮೇಲೆ‌ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಇಂದು ಮುಂಜಾನೆ ಕಾಂಗ್ರೆಸ್‌ ಮುಖಂಡ ವಿವೇಕ್ ರಾಜ್ ಪೂಜಾರಿ (Vivek Raj Poojary ) ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಮಂಗಳೂರಿನ ಮಣ್ಣಗುಡ್ಡದಲ್ಲಿರುವ ವಿವೇಕ್ ಪೂಜಾರಿ ಮನೆ ಇದೆ. 2 ಕಾರ್ ನಲ್ಲಿ 8 ಮಂದಿ ಐಟಿ‌ ಅಧಿಕಾರಿಗಳು ಬಂದಿದ್ದು, ಇವರು ಪನಾಮಾ ಸಂಸ್ಥೆಯ ಮಾಲೀಕರಾಗಿದ್ದಾರೆ. ಮಾತ್ರವಲ್ಲ ಹಲವಾರು ಉದ್ಯಮಗಳನ್ನು ಕೂಡ ವಿವೇಕ್ ಪೂಜಾರಿ ನಡೆಸುತ್ತಿದ್ದಾರೆ. ಇಂದು ಮುಂಜಾನೆಯಿಂದ ವಿವೇಕ್ ಮನೆಯಲ್ಲಿ ಐ ಟಿ‌ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ವಿದೇಶಿ ವಿನಿಮಯ ಉಲ್ಲಂಘನೆ : ಇಡಿಯಿಂದ ಮತ್ತೆ ಬಿಬಿಸಿ ಅಧಿಕಾರಿಗಳ ವಿಚಾರಣೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಂಯೋಜಕರಾಗಿರುವ ಇವರು, ಯುವ ಉದ್ಯಮಿ ಕೂಡ ಹೌದು. ಪನಾಮ ನಿಗಮದ ಸಿಇಒ ಮತ್ತು ಅಧ್ಯಕ್ಷರೂ ಆಗಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಚಿಕ್ಕಮಗಳೂರು ನಗರದ 165 ಬೂತ್‌ಗಳನ್ನು ನೋಡಿಕೊಳ್ಳಲಿದ್ದಾರೆ. ಕೆಪಿಸಿಸಿಯು ವಿವೇಕ್ ಅವರ ನಾಯಕತ್ವ ಗುಣಗಳನ್ನು ಮತ್ತು ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿದೆ ಮತ್ತು ಚುನಾವಣೆಗೆ ಚಿಕ್ಕಮಗಳೂರು ಪಟ್ಟಣವನ್ನು ನೋಡಿಕೊಳ್ಳುವ ಅವಕಾಶವನ್ನು ನೀಡಿದೆ.