ಬೆಂಗಳೂರಿನ ಒಂದು ವಿದ್ಯುತ್ ಚಿತಾಗಾರ ಸ್ಥಗಿತ ಮಾಡಲಾಗಿದೆ. ಕೆಲ ದಿನಗಳ ಕಾಲ ಚಿತಾಗಾರ ಸ್ಥಗಿತಗೊಳ್ಳಲಿದೆ. 

ಬೆಂಗಳೂರು [ಆ.21]: ನಗರದ ಮೈಸೂರು ರಸ್ತೆ ಜಗಜೀವನ್‌ರಾಮ್‌ ನಗರದಲ್ಲಿ ಇರುವ ಬಿಬಿಎಂಪಿಯ ವಿದ್ಯುತ್‌ ಚಿತಾಗಾರವನ್ನು ಮೇಲ್ದರ್ಜೆಗೇರಿಸುವ ಉದ್ದೇಶದಿಂದ ನಾಲ್ಕು ತಿಂಗಳು ಸ್ಥಗಿತಗೊಳಿಸಲಾಗುತ್ತಿದೆ. 

Add Asianetnews Kannada as a Preferred SourcegooglePreferred

ಚಿತಾಗಾರದ ಕಾಮಗಾರಿಗೆ 120 ದಿನ ಅವಶ್ಯಕತೆ ಇದೆ. ಹಾಗಾಗಿ, ಚಿತಾಗಾರದ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಸಹಕರಿಸಬೇಕೆಂದು ಬಿಬಿಎಂಪಿಯ ಪಶ್ಚಿಮ ವಲಯದ ಕಾರ್ಯಪಾಲ ಎಂಜಿನಿಯರ್‌ ಮನವಿ ಮಾಡಿದ್ದಾರೆ.

ಮೇಲ್ದರ್ಜೆಗೆ ಏರಿಸಿದ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳಿಸಿ ಶೀಘ್ರವೇ ಆರಂಭವಾಗಲಿದೆ ಎಂದು ಹೇಳಿದ್ದಾರೆ.