ಜೆಡಿಎಸ್ ಅನರ್ಹ ಶಾಸಕರೋರ್ವರು ಮುಖ್ಯಮಂತ್ರಿ ಭೇಟಿ ಮಾಡಿದ್ದು, ಈ ಮೂಲಕ ಬಿಜೆಪಿ ಸೇರುವ ಸೂಚನೆ ನೀಡಿದ್ದಾರೆ.
ಮಂಡ್ಯ (ಆ.29): KRS ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಾಗೀನ ಅರ್ಪಣೆಗೆ ಆಗಮಿಸಿದ್ದು, ಈ ವೇಳೆ ಅನರ್ಹ ಶಾಸಕರೋರ್ವರು ಸಿಎಂ ಭೇಟಿಗೆ ಆಗಮಿಸಿದ್ದಾರೆ.
Add Asianetnews Kannada as a Preferred Source

ಕೆ.ಆರ್.ಪೇಟೆ ಅನರ್ಹ ಶಾಸಕ ನಾರಾಯಣಗೌಡ KRSಗೆ ಬಂದು ಸಿಎಂ ಯಡಿಯೂರಪ್ಪ ಅವರ ಬಾಗೀನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಅನರ್ಹ ಶಾಸಕ ನಾರಾಯಣ ಗೌಡ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದಿದ್ದರೂ ಕೂಡ ಆಗಮಿಸಿದ್ದು, ಈ ಮೂಲಕ ಬಿಜೆಪಿ ಸೇರುವ ಸೂಚನೆ ನೀಡಿದ್ದಾರೆ.
ಮಂಡ್ಯದ ತಮ್ಮ ಕ್ಷೇತ್ರವಾದ ಕೆ.ಆರ್.ಪೇಟೆಯ ಬಿಜೆಪಿ ಮುಖಂಡರ ಜೊತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.