'ಮನ್ಮುಲ್ ಹಗರಣ ಸಂಬಂಧ ಯಾವ ತನಿಖೆಯಾದರೂ ಮಾಡಿಕೊಳ್ಳಲಿ'
- ಮುಖ್ಯಮಂತ್ರಿ ಬಳಿ ನಾನೇ ಸಮಯ ನಿಗದಿಪಡಿಸುತ್ತೇನೆ
- ಏಳು ಶಾಸಕರ ಜೊತೆಗೆ ಮನ್ಮುಲ್ ಆಡಳಿತ ಮಂಡಳಿ ನಿರ್ದೇಶಕರನ್ನೂ ಕಳುಹಿಸಿಕೊಡುತ್ತೇನೆ
- ಹಗರಣದ ಬಗ್ಗೆ ಯಾವ ತನಿಖೆಯನ್ನಾದರೂ ಮಾಡಿಸಿಕೊಳ್ಳಲಿ - ಎಚ್ ಡಿಕೆ
ಮಳವಳ್ಳಿ (ಜೂ.30): ಮುಖ್ಯಮಂತ್ರಿ ಬಳಿ ನಾನೇ ಸಮಯ ನಿಗದಿಪಡಿಸುತ್ತೇನೆ. ಏಳು ಶಾಸಕರ ಜೊತೆಗೆ ಮನ್ಮುಲ್ ಆಡಳಿತ ಮಂಡಳಿ ನಿರ್ದೇಶಕರನ್ನೂ ಕಳುಹಿಸಿಕೊಡುತ್ತೇನೆ.
ಹಗರಣದ ಬಗ್ಗೆ ಯಾವ ತನಿಖೆಯನ್ನಾದರೂ ಮಾಡಿಸಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಈ ಮೂಲಕ ಮನ್ಮುಲ್ ಆಡಳಿತ ಮಂಡಳಿ ವಿರುದ್ಧದ ಮಾಜಿ ಸಚಿವ ಚಲುವರಾಯಸ್ವಾಮಿ ಟೀಕೆಗೆ ತಿರುಗೇಟು ನೀಡಿದರು.
ಬಹಿರಂಗ ಹೇಳಿಕೆ ಕೊಡಲಿ : ಎಚ್ಡಿಕೆ - ದೇವೇಗೌಡರಿಗೆ ಕೈ ನಾಯಕ ಸವಾಲ್
ನೀರು ಮಿಶ್ರಿತ ಹಾಲು ಹಗರಣದ ತನಿಖೆಗೆ ಜೆಡಿಎಸ್ ವರಿಷ್ಠರೇ ಅಡ್ಡಿಯಾಗಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹಾಲಿಗೆ ನೀರು ಬೆರೆಸುತ್ತಿರುವುದು 10-15 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ.
ಆದರೆ, ಮಹಾನುಭಾವರೊಬ್ಬರು ಹಾಲಿ ಆಡಳಿತ ಮಂಡಳಿ ಸೂಪರ್ಸೀಡ್ ಆಗಬೇಕೆನ್ನುತ್ತಿದ್ದಾರೆ. ಅವರ (ಚಲುವರಾಯಸ್ವಾಮಿ) ನಾಯಕತ್ವದಲ್ಲೇ ಸಿಎಂ ಬಳಿ ನಮ್ಮ ಶಾಸಕರು, ಆಡಳಿತ ಮಂಡಳಿಯವರನ್ನು ಕರೆದುಕೊಂಡು ಹೋಗಿ ಯಾವ ತನಿಖೆಯನ್ನಾದರೂ ಮಾಡಿಸಿಕೊಳ್ಳಲಿ ಎಂದು ಹೇಳಿದರು.