ಸಮಾನ ಮನಸ್ಕರೊಂದಿಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜೆಡಿಎಸ್ ನಾಯಕ ದತ್ತಾ| ದೇಶದಲ್ಲಿ ಬಡಜನರು ಹಸಿವಿನಿಂದ ಸಾಯುತ್ತಿದ್ದಾರೆ| ಈ ಸ್ಥಿತಿಗೆ ನಾವು ಕೂಡ ಪಾಲುದಾರರಾಗಿದ್ದೇವೆ| ಪಶ್ಚಾತಾಪ, ಪ್ರಾಯಶ್ಚಿತದ ಫಲವಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದೇವೆ: ದತ್ತಾ| 

ಚಿಕ್ಕಮಗಳೂರು(ಏ.10): ಲಾಕ್‌ಡೌನ್‌ ಹಿನ್ನಲೆಯಲ್ಲಿ ನಿರ್ಗತಿಕರು, ಬಡವರು, ವಲಸಿಗರು ಹಸಿವಿನಿಂದ ಪರದಾಡುತ್ತಿರುವ ಹಿನ್ನೆಲೆಯಲ್ಲಿ ನಿಮ್ಮ ಜೊತೆ ನಾವಿದ್ದೇವೆ ಎಂದು ಸಾರಲು ಜೆಡಿಎಸ್‌ ನಾಯಕ ವೈ ಎಸ್ ವಿ ದತ್ತಾ ಸೇರಿದಂತೆ ಸಮಾನ ಮನಸ್ಕರಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

Add Asianetnews Kannada as a Preferred SourcegooglePreferred

ನಗರದ ಶಂಕರಪುರದ ದಲಿತ ಮಹಿಳೆ ಸಾವಿತ್ರಮ್ಮ ಎಂಬವರ ಮನೆಯಲ್ಲಿ ಉಪವಾಸ ಆರಂಭಿಸಿರುವ ಅವರು, ಇಂದು(ಶುಕ್ರವಾರ) ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. 

ಪಕ್ಷಿಗಳ ಪರದಾಟ: ಧಾನ್ಯ ನೀಡಿ ಮಾನವೀಯತೆ ಮೆರೆದ ಸಚಿವ ಅಶೋಕ್‌

ಈ ವೇಳೆ ಮಾತನಾಡಿದ ಅವರು, ದೇಶದಲ್ಲಿ ಬಡಜನರು ಹಸಿವಿನಿಂದ ಸಾಯುತ್ತಿದ್ದಾರೆ. ಈ ಸ್ಥಿತಿಗೆ ನಾವು ಕೂಡ ಪಾಲುದಾರರಾಗಿದ್ದೇವೆ. ಪಶ್ಚಾತಾಪ, ಪ್ರಾಯಶ್ಚಿತದ ಫಲವಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ವೈ ಎಸ್ ವಿ ದತ್ತಾ ಅವರಿಗೆ ಮಾಜಿ ಸಚಿವ ಬಿ ಬಿ ನಿಂಗಯ್ಯ , ಜೆಡಿಎಸ್, ಸಿಪಿಐ, ಬಿಎಸ್ ಪಿ ಮುಖಂಡರು ಸಾಥ್ ನೀಡಿದ್ದಾರೆ. <br/><br/>"