ಹೊಸ ರಾಜಕೀಯ ಬೆಳವಣಿಗೆಯೊಂದರ ಬಗ್ಗೆ ಜೆಡಿಎಸ್ ಶಾಸಕರೋರ್ವರು ಪರೋಕ್ಷ ಸುಳಿವು ನೀಡಿದ್ದಾರೆ. ಅಲ್ಲದೇ ಆಪರೇಷನ್ ಕಮಲದ ಆಫರ್ ಬಗ್ಗೆ ದೂರು ನೀಡುವ ಸಾಧ್ಯತೆ ಇದೆ.
ಕೋಲಾರ [ಸೆ.06]: ‘ಆಪರೇಷನ್ ಕಮಲ’ ಹೆಸರಿನಲ್ಲಿ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರಿಗೆ ಬಿಜೆಪಿ ಒಡ್ಡಿತ್ತು ಎನ್ನಲಾದ ಹಣದ ಆಮಿಷದ ಬಗ್ಗೆ ಜಾರಿ ನಿರ್ದೇಶನಾಲಯ(ಇ.ಡಿ)ಕ್ಕೆ ದೂರು ಸಲ್ಲಿಕೆಯಾಗುವ ಸಂಭವ ಇದೆ ಎನ್ನಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಾಜಿ ಸ್ಪೀಕರ್ ರಮೇಶ್ಕುಮಾರ್ ಮತ್ತು ಶಾಸಕ ಕೆ.ಶ್ರೀನಿವಾಸಗೌಡ ಸೇರಿ ಐದಾರು ಮಂದಿ ಶುಕ್ರವಾರ ದೆಹಲಿಗೆ ತೆರಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ರನ್ನು ಭೇಟಿ ಮಾಡಲಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಡಿಕೆಶಿ ಭೇಟಿ ನಂತರ ಇಡಿ ಕಚೇರಿಗೆ ತೆರಳಿ ಆಪರೇಷನ್ ಕಮಲದ ಕುರಿತು ದೂರು ನೀಡಲಿದ್ದಾರೆ ಎನ್ನಲಾಗುತ್ತಿದೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ ಶಾಸಕ ಕೆ.ಶ್ರೀನಿವಾಸಗೌಡ, ಶುಕ್ರವಾರ ಹೊಸ ರಾಜಕೀಯ ಬೆಳವಣಿಗೆ ನಡೆಯಲಿದೆ ಎಂದು ಈ ಕುರಿತು ಪರೋಕ್ಷ ಸುಳಿವನ್ನೂ ನೀಡಿದರು.
