Asianet Suvarna News Asianet Suvarna News

ನ.1 ರಂದು ಮನೆ ಮನೆಗಳಲ್ಲಿ ಕನ್ನಡ ಬಾವುಟ ಭಿಯಾನ

ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ನ.1 ರಿಂದ ಮನೆ-ಮನೆಗಳಲ್ಲಿ ಕನ್ನಡ ಬಾವುಟ ಎನ್ನುವ ಅಭಿಯಾನ ಕೈಗೊಳ್ಳಲು ಜಾತ್ಯಾತೀತ ಜನತಾ ದಳ ನಿರ್ಧಾರ ಕೈಗೊಂಡಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಆರ್‌.ಸಿ. ಆಂಜಿನಪ್ಪ ತಿಳಿಸಿದರು.

Kannada flag abhiyana  From Nov 1 snr
Author
First Published Oct 30, 2022, 5:07 AM IST

 ತುಮಕೂರು (ಅ.30): ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ನ.1 ರಿಂದ ಮನೆ-ಮನೆಗಳಲ್ಲಿ ಕನ್ನಡ ಬಾವುಟ ಎನ್ನುವ ಅಭಿಯಾನ ಕೈಗೊಳ್ಳಲು ಜಾತ್ಯಾತೀತ ಜನತಾ ದಳ ನಿರ್ಧಾರ ಕೈಗೊಂಡಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಆರ್‌.ಸಿ. ಆಂಜಿನಪ್ಪ ತಿಳಿಸಿದರು.

ಇಲ್ಲಿನ ಜಿಲ್ಲಾ ಜೆಡಿಎಸ್‌ (JDS)  ಕಚೇರಿಯಲ್ಲಿ ಕನ್ನಡ (Kannada)  ರಾಜ್ಯೋತ್ಸವದ ಪ್ರಯುಕ್ತ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಅಭಿಯಾನದ ಅಡಿಯಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು, ಮುಖಂಡರು ಮತ್ತು ಬೆಂಬಲಿಗರ ಮನೆಗಳ ಮೇಲೆ ಕನ್ನಡ ಬಾವುಟ (Flag)  ಮತ್ತು ಪಕ್ಷದ ಬಾವುಟಗಳನ್ನು ಹಾರಿಸಬೇಕು. ತಮ್ಮ ಕ್ಷೇತ್ರದಲ್ಲಿರುವ ನೆರೆ-ಹೊರೆಯವರ ಮನೆ ಮೇಲೆ ಕೂಡ ಕನ್ನಡ ಬಾವುಟ ಹಾರಿಸಲು ಬಾವುಟ ನೀಡುವುದು ಮತ್ತು ನೆರೆ-ಹೊರೆಯವರನ್ನು ಸಹ ಪಕ್ಷದ ಭಾವುಟವನ್ನು ಹಾರಿಸಲು ಮನವೊಲಿಸಬೇಕು. ಆದರೆ, ಒತ್ತಾಯ ಮತ್ತು ಬಲವಂತದಿಂದ ಬಾವುಟಗಳನ್ನು ಹಾರಿಸಲು ಪ್ರಯತ್ನ ಮಾಡಬಾರದು. ಪಕ್ಷದ ವತಿಯಿಂದ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ಇಡೀ ನವೆಂಬರ್‌ ತಿಂಗಳಲ್ಲಿ ಕನ್ನಡ ರಾಜೋತ್ಸವ ಆಚರಣೆ ಮಾಸವೆಂದು ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಬೆಳ್ಳಿ ಲೋಕೇಶ್‌, ಪ್ರತಿ ವರ್ಷದಂತೆ ಈ ವರ್ಷವು ಕನ್ನಡ ರಾಜ್ಯೋತ್ಸವವನ್ನು ರಾಜ್ಯದಲ್ಲಿ ಮತ್ತು ರಾಜ್ಯದ ಗಡಿನಾಡು ಭಾಗದಲ್ಲಿ ಹಾಗೂ ಹೊರ ರಾಜ್ಯ ಮತ್ತು ರಾಷ್ಟ್ರಗಳಲ್ಲಿ ಆಚರಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ, ಜಗತ್ತಿನಾದ್ಯಂತ ರಾಷ್ಟ್ರಗಳು ಪ್ರಾದೇಶಿಕತೆ ಮತ್ತು ಭಾಷೆಯ ಬಗ್ಗೆ ಸಾರ್ವಭೌಮತ್ವ ಸ್ಥಾಪಿಸಿವೆ ಎಂದರು.

ಭಾರತ ಒಂದು ಒಕ್ಕೂಟ ರಾಷ್ಟ್ರ, ರಾಷ್ಟ್ರದಲ್ಲಿ, ಒಟ್ಟು 22 ಪ್ರಾದೇಶಿಕ ಭಾಷೆಗಳಿವೆ. ಪ್ರಾದೇಶಿಕತೆಯಲ್ಲಿ ವೈವಿದ್ಯತೆ ಇದೆ. ಭಾಷಾವಾರು ವಿಂಗಡಣೆ ಆಗಿರುವ ರಾಜ್ಯಗಳು ತನ್ನ ಪ್ರಾದೇಶಿಕತೆಗೆ ಮೆರಗು ಕೊಡುವುದರೊಂದಿಗೆ ನೆಲ, ಜಲ ಮತ್ತು ಭಾಷೆಯ ಬಗ್ಗೆ ತಮ್ಮ ಇರುವಿಕೆಗಾಗಿ ಶ್ರಮಿಸುತ್ತಿವೆ. ಯಾವುದೇ ರಾಷ್ಟ್ರ ಅಥವಾ ರಾಜ್ಯದ ಅಸ್ತಿತ್ವಕ್ಕೆ, ಆ ರಾಷ್ಟ್ರ ಅಥವಾ ರಾಜಕೀಯ ಸ್ಥಿರತೆ ಮತ್ತು ಸಂಸ್ಕೃತಿ ಪ್ರತಿಬಿಂಬಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.

ಕನ್ನಡ ರಾಜೋತ್ಸವ ಮಾಸಾಚರಣೆ ಅಭಿಯಾನದಲ್ಲಿ, ಕನ್ನಡ ನಾಡಿನ ನೆಲ, ಜಲ ನುಡಿಗೆ ಶ್ರಮಿಸಿದ ಮಹನೀಯರನ್ನು ನೆನೆಯುವುದು ಅತ್ಯವಶ್ಯ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಅಭಿಯಾನದಲ್ಲಿ ಶಾಲಾ-ಕಾಲೇಜುಗಳು, ಯುವಕ ಸಂಘಗಳು, ಶಕ್ತಿ, ಸಂಘಗಳು, ಸಾರ್ವಜನಿಕ, ಖಾಸಗಿ ಸಂಘ-ಸಂಸ್ಥೆಗಳಲ್ಲಿ ಕನ್ನಡ ರಾಜೋತ್ಸವ ಆಚರಣೆಯನ್ನು ಪಕ್ಷದ ಮುಖಂಡರು ಕೈಗೊಳ್ಳಬೇಕು ಎಂದರು.

ಮುಖಂಡ ಗೋವಿಂದರಾಜು ಮಾತನಾಡಿ, ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ನಾಡಿನ ಪ್ರಸಿದ್ಧ ಕವಿಗಳು, ಕಲಾವಿದರು, ನಾಡು ಒಗ್ಗೂಡಿಕೆಗೆ ಶ್ರಮಿಸಿದ ರಾಜಕೀಯ ಮುತ್ಸದ್ಧಿಗಳ ಬಗ್ಗೆ ನೆನೆದು ಅವರ ಸೇವೆಯನ್ನು ಸ್ಮರಿಸುವುದು ಅತ್ಯವಶ್ಯಕ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ನೀತಿಯನ್ನು ಬಲವಂತವಾಗಿ ಖಂಡಿಸಬೇಕು. ಕೇಂದ್ರ ಸರ್ಕಾರದ ನಾಗರಿಕ ಸೇವೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ಒತ್ತಾಯ ಮಾಡಬೇಕು. ಅದರಲ್ಲೂ ರೈಲ್ವೆ, ಸೈನ್ಯ, ಬ್ಯಾಂಕಿಂಗ್‌ ಕ್ಷೇತ್ರಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಹೋರಾಟ ಅಗತ್ಯ ಎನ್ನುವುದನ್ನು ಕನ್ನಡ ಜನತೆಗೆ ಮನದಟ್ಟು ಮಾಡಿಕೊಡುವ ಕೆಲಸವಾಗಬೇಕು ಎಂದರು.

ಸಭೆಯಲ್ಲಿ ಉಪಮೇಯರ್‌ ನರಸಿಂಹಮೂರ್ತಿ, ಪಾಲಿಕೆ ಸದಸ್ಯರಾದ ಧರಣೇಂದ್ರಕುಮಾರ್‌, ಶ್ರೀನಿವಾಸ್‌, ಮಂಜುನಾಥ್‌, ಮಹಾಲಿಂಗಪ್ಪ, ಕೃಷ್ಣಮೂರ್ತಿ, ಬಿ.ಎನ್‌. ಜಗದೀಶ್‌, ತಹೇರಾ ಕುಲ್ಸಮ್‌, ಲೀಲಾವತಿ, ಲಕ್ಷ್ಮಮ್ಮ ವೀರಣ್ಣಗೌಡ, ಪ್ರೆಸ್‌ ರಾಜಣ್ಣ, ಮೆಡಿಕಲ್‌ ಮಧು, ರಂಗಪ್ಪ, ಹೊನ್ನೇಗೌಡ, ದೇವರಾಜು, ಗಂಗಣ್ಣ, ಅಬ್ದುಲ್‌ ಖಾದರ್‌ ಮತ್ತಿತರರು ಪಾಲ್ಗೊಂಡಿದ್ದರು.

Follow Us:
Download App:
  • android
  • ios