*   ಹೃದಯಾಘಾತದಿಂದ ಜೆ.ಸತ್ಯರಾಜ್‌ ನಿಧನ*   ಕರ್ತವ್ಯನಿರತರಾಗಿದ್ದಾಗಲೇ ಹೃದಯಾಘಾತಕ್ಕೊಳಗಾಗಿದ್ದ ಸತ್ಯರಾಜ್‌*   ಮೃತರ ಅಂತ್ಯಕ್ರಿಯೆ ಇಂದು ನಡೆಯಲಿದೆ

ಕೋಲಾರ(ನ.22):  ‘ಕನ್ನಡಪ್ರಭ’(Kannada Prabha) ಪತ್ರಿಕೆಯ ಕೋಲಾರ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಜೆ.ಸತ್ಯರಾಜ್‌(J Sathyaraj)(58) ಭಾನುವಾರ ತೀವ್ರ ಹೃದಯಾಘಾತದಿಂದ(Heart Attack) ನಿಧನರಾಗಿದ್ದಾರೆ(Passedaway). 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ಕರ್ತವ್ಯನಿರತರಾಗಿದ್ದಾಗಲೇ ಹೃದಯಾಘಾತಕ್ಕೊಳಗಾದ ಅವರನ್ನು ತಕ್ಷಣವೇ ಆಸ್ಪತ್ರೆಗೆ(Hospital) ದಾಖಲಿಸಲು ಯತ್ನಿಸಿದರೂ ದಾರಿಮಧ್ಯೆ ಕೊನೆಯುಸಿರೆಳೆದರು. ಕೋಲಾರ(Kolar) ತಾಲೂಕಿನ ಬೆತ್ತನಿ ಗ್ರಾಮದವರಾದ ಸತ್ಯರಾಜ್‌, ಕೋಲಾರದ ಹೊನ್ನುಡಿ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟು ಬಳಿಕ ಅಗ್ನಿ ಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದರು. 

ಕನ್ನಡ ಸುದ್ದಿವಾಹಿನಿ ಪತ್ರಕರ್ತ ನಿಧನ, ಅಂಗಾಂಗ ದಾನ ಮಾಡಿದ ಪೋಷಕರು

ಬಳಿಕ ವಿಜಯಕರ್ನಾಟಕ ವರದಿಗಾರರಾಗಿದ್ದ ಅವರು ಕಳೆದ 5 ವರ್ಷದಿಂದ ಕೋಲಾರ ಜಿಲ್ಲೆಯ ಕನ್ನಡಪ್ರಭ ಜಿಲ್ಲಾ ವರದಿಗಾರರಾಗಿ(Reporter) ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆಯೆಂದು ಕುಟುಂಬದ ಮೂಲಗಳು ತಿಳಿಸಿವೆ. ಸತ್ಯರಾಜ್‌ ನಿಧನಕ್ಕೆ ‘ಕನ್ನಡಪ್ರಭ’ ಸಿಬ್ಬಂದಿ ಸಂತಾಪ(Condolences) ಸೂಚಿಸಿದ್ದಾರೆ.