ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿರ್ಧಾರವೇ ಅಂತಿಮ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ
ಬೆಳಗಾವಿ (ಅ.05): ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಹಾಗೂ ಜಿಲ್ಲೆಯ ಹಾಲಿ ಸಚಿವರನ್ನು ಸಂಪುಟದಿಂದ ಕೈ ಬಿಡುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
Add Asianetnews Kannada as a Preferred Source

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜೆಡಿಎಸ್ ಪ್ರಮುಖ ಮುಖಂಡ ರಾಜೀನಾಮೆ : ಕಣ್ಣೀರಿಟ್ಟು ಭಾವುಕ
ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿದ್ದೇವೆ ಎಂದರು.
