ಚಾಮರಾಜನಗರ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ದುರಂತ ಕೊರೋನಾ ನಿರ್ವಹಣೆ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ  ಪರಿಹಾರ ನೀಡುವಂತೆ ಸೂಚಿಸಿದ ಕರ್ನಾಟಕ ಹೈ ಕೋರ್ಟ್ 

 ಬೆಂಗಳೂರು (ಮೇ.13): ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ನೀಡುವುದು ಸೇರಿದಂತೆ ಉನ್ನತ ಮಟ್ಟದ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಪರಿಗಣಿಸುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

Add Asianetnews Kannada as a Preferred SourcegooglePreferred

ಕೊರೋನಾ ನಿರ್ವಹಣೆ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎ.ಎಸ್‌.ಓಕ ಅವರಿದ್ದ ವಿಭಾಗೀಯ ಪೀಠ, ಘಟನೆ ಸಂಬಂಧ ಪ್ರಾಥಮಿಕ ತನಿಖೆ ನಡೆಸಿರುವ ನಿವೃತ್ತ ನ್ಯಾ.ಎ.ಎನ್‌. ವೇಣುಗೋಪಾಲಗೌಡ ನೇತೃತ್ವದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿ​ಕಾರದ ಉನ್ನತ ಮಟ್ಟದ ಸಮಿತಿ ಮಂಗಳವಾರ ಸಲ್ಲಿಸಿದ್ದ ಪ್ರಾಥಮಿಕ ವರದಿ ಪರಿಶೀಲಿಸಿ, ಶಿಫಾರಸ್ಸುಗಳನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತು. ಬಳಿಕ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಚಾಮರಾಜನಗರ ಘಟನೆ: ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ ..

ಸಮಿತಿ ಶಿಫಾರಸ್ಸುಗಳು: ಆಮ್ಲಜನಕ ಕೊರತೆಯಿಂದ ಮೃತಪಟ್ಟವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ನೀಡಬೇಕು. ಪ್ರತಿ ಜಿಲ್ಲೆಯಲ್ಲಿಯೂ ಹೆಚ್ಚುವರಿಯಾಗಿ ಆಮ್ಲಜನಕ ಸಂಗ್ರಹಿಸಿರಬೇಕು. ಆಮ್ಲಜನಕ ಸಾಗಾಟದ ವಾಹನಗಳಿಗೆ ಭದ್ರತೆ ಒದಗಿಸಬೇಕು. ಮೈಸೂರಿನಲ್ಲಿರುವ ಆಮ್ಲಜನಕ ಬಾಟ್ಲಿಂಗ್‌ ಘಟಕ ದುರಸ್ತಿ ಪಡಿಸಬೇಕು ಎಂದು ವರದಿಯಲ್ಲಿ ಶಿಫಾರಸ್ಸುಗಳನ್ನು ಮಾಡಲಾಗಿದೆ.